Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:15 - ಕನ್ನಡ ಸತ್ಯವೇದವು J.V. (BSI)

15 ಯೌವನಾರಭ್ಯ ಕುಗ್ಗಿದವನೂ ಮೃತಪ್ರಾಯನೂ ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬಾಲ್ಯದಿಂದಲೂ ನಾನು ಬಾಧಿತನು ಸಾಯುವುದಕ್ಕೆ ಸಿದ್ಧನೂ ಆಗಿದ್ದೇನೆ. ನಿಮ್ಮ ದಂಡನೆಯನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:15
13 ತಿಳಿವುಗಳ ಹೋಲಿಕೆ  

ಸರ್ವಶಕ್ತನ ಬಾಣಗಳು ನನ್ನಲ್ಲಿ ನಾಟಿರುತ್ತವೆ; ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ನನ್ನ ಆತ್ಮವು ಒಡೆದುಹೋಗಿದೆ, ನನ್ನ ದಿನಗಳು ಮುಗಿದಿವೆ, ಗೋರಿಯು ನನಗೆ ಕಾದಿದೆ.


ನಾನು ಮೊರೆಯಿಟ್ಟರೂ ನೀನು ಉತ್ತರಕೊಡುವದಿಲ್ಲ, ಎದ್ದುನಿಂತರೂ ನನ್ನನ್ನು [ಸುಮ್ಮನೆ] ನೋಡುತ್ತಿರುವಿ.


ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಯಾಕೆ ನನ್ನನ್ನು ತಳ್ಳಿಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?


ನಮ್ಮ ಪ್ರಾಣವು ಧೂಳಿನಲ್ಲಿ ಅಣಗಿಹೋಗಿದೆ; ಶರೀರವು ನೆಲಕ್ಕೆ ಹತ್ತಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು