Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 9:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಕುಗ್ಗಿಹೋದವರಿಗೆ ಆಶ್ರಯವೂ ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 9:9
26 ತಿಳಿವುಗಳ ಹೋಲಿಕೆ  

ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.


ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಯೆರೂಸಲೇವಿುನ ನಿವಾಸಿಗಳಿಗೆ ಬಲೆಯೂ ಬೋನೂ ಆಗುವನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ನಮಗೆ ಕೈಕೊಟ್ಟು ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.


ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ದೇವರು ಅದರ ಕೊತ್ತಲುಗಳಲ್ಲಿ ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.


ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು