Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 90:8 - ಕನ್ನಡ ಸತ್ಯವೇದವು J.V. (BSI)

8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಮ್ಮ ಅಕ್ರಮಗಳನ್ನು ನಿಮ್ಮ ಮುಂದೆ ಇಟ್ಟಿದ್ದೀರಿ. ನಾವು ಮುಚ್ಚಿಟ್ಟುಕೊಂಡಿರುವ ಪಾಪಗಳು ನಿಮ್ಮ ಸನ್ನಿಧಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 90:8
23 ತಿಳಿವುಗಳ ಹೋಲಿಕೆ  

ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಲ್ಲ, ಪ್ರತ್ಯಕ್ಷದಲ್ಲೇ ಇದೆ.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಮತ್ತು ನಮ್ಮ ಹೃದಯವು ಯಾವ ವಿಷಯದಲ್ಲಿಯಾದರೂ ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೂ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವನಾಗಿದ್ದಾನೆಂದು ನಾವು ತಿಳಿದು ದೇವರ ಸಮಕ್ಷಮದಲ್ಲಿ ನಮ್ಮ ಹೃದಯವನ್ನು ಸಮಾಧಾನಪಡಿಸುವೆವು.


[ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.


ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.


ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಬಾಯಿಗದರಿಕೆಯಿಂದ ನಾಶವಾಗುತ್ತಾರೆ.


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.


ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು;


ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.


ಅದೇನಂದರೆ - ನಾನು ತಪ್ಪುಮಾಡಿದರೆ ನೀನು ಗಮನಿಸುತ್ತೀ; ನನ್ನ ದೋಷವನ್ನು ಕ್ಷವಿುಸುವದಿಲ್ಲ.


ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂವಿುಯಿಂದ ತೆಗೆದುಹಾಕಲಿ.


ನೀನು ಬಹಳ ಚೌಳನ್ನು ಹಾಕಿಕೊಂಡು ಸಬ್ಬಿನಿಂದ ತೊಳಕೊಂಡರೂ ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕರೆಯಾಗಿ ನಿಂತಿದೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು