Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 92:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಆಲಯದಲ್ಲಿ [ಸಸಿಗಳಂತೆ] ನೆಡಲ್ಪಟ್ಟವರು ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13-14 ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 92:13
14 ತಿಳಿವುಗಳ ಹೋಲಿಕೆ  

ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ಹೇಗಂದರೆ ನಾವು ಆತನ ಮರಣಕ್ಕೆ ಸದೃಶವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.


ಕೃತಜ್ಞತಾಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ ಕೀರ್ತನೆಯೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರ ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಆತನಿಗೆ ಹೊತ್ತ ಹರಕೆಗಳನ್ನು ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯಾಹುವಿಗೆ ಸ್ತೋತ್ರ!


ಯೆಹೋವನ ಮಂದಿರದಲ್ಲಿಯೂ ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆಮಾಡುವವರೇ, ಆತನನ್ನು ಕೀರ್ತಿಸಿರಿ.


ಇದಲ್ಲದೆ ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಹಾಪ್ರಾಕಾರಕ್ಕೆ ಬಾಗಲುಗಳನ್ನೂ ಮಾಡಿಸಿದನು; ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.


ಆದರೆ ಕೆಲವು ಕೊಂಬೆಗಳು ಮುರಿದುಹಾಕಲ್ಪಡಲು ಕಾಡೆಣ್ಣೇಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ;


ಸರ್ವಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.


ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ; ನಿನ್ನ ವಸ್ತ್ರಗಳ ಸುವಾಸನೆಯೋ ಲೆಬನೋನಿನ ಪರಿಮಳವೇ.


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಒಡೆಯುವದು; ಲೆಬನೋನಿನ [ದೇವದಾರುಗಳ] ಹಾಗೆ ಬೇರುಬಿಟ್ಟುಕೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು