Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ I ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ I ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಆಳುತ್ತಿರುವನು! ಭೂಮಿಯು ಸಂತೋಷಿಸಲಿ. ದೂರ ದೇಶಗಳೆಲ್ಲಾ ಹರ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:1
26 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಮಹಿಮಾವಸ್ತ್ರವನ್ನು ಧರಿಸಿದ್ದಾನೆ, ಧರಿಸಿದ್ದಾನೆ. ಶೌರ್ಯವನ್ನು ನಡುಕಟ್ಟಾಗಿ ಬಿಗಿದಿದ್ದಾನೆ; ಭೂಲೋಕವು ಸ್ಥಿರವಾಗಿರುವದು, ಕದಲುವದಿಲ್ಲ.


ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.


ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದ; ಮೇಲಣ ಲೋಕಗಳಲ್ಲಿ ಜಯ ಎಂದು ಆರ್ಭಟಿಸಿದರು.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ದೇಶಭಾಷಾ ಕುಲಜನಾಂಗಗಳ ಪ್ರಕಾರ [ಇವರೇ ಯೆಫೆತನ ವಂಶದವರು].


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ನನ್ನ ರಕ್ಷಣಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವದು; ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂವಿುಯ ಕಟ್ಟಕಡೆಯವರು ನಡುಗಿದರು, ಎಲ್ಲರೂ ನೆರೆದುಬಂದರು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು