ಕೊಲೊಸ್ಸೆಯವರಿಗೆ 1:27 - ಕನ್ನಡ ಸತ್ಯವೇದವು J.V. (BSI)27 ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಮಹಿಮೆನ್ ಭರುನ್ ಹೊತ್ತೆ ಹೆ ಖರೆ, ದುಸ್ರ್ಯಾ ಲೊಕಾಕ್ನಿ ಕಳ್ವುಕ್ ದೆವಾನ್ ನಿರ್ದಾರ್ ಕರ್ಲ್ಯಾನ್, ಹೆ ಮೊಟೆ ಖರೆ ಸಗ್ಳ್ಯಾ ಲೊಕಾಕ್ನಿ ಪರ್ಗಟ್ ಹೊಲೆ. ತುಮ್ಚ್ಯಾಕ್ಡೆ ಹೊತ್ತೊ ಕ್ರಿಸ್ತುಚ್ ತೆ ಖರೆ ಹೊವ್ನ್ ಹಾಯ್ ದೆವಾಚ್ಯಾ ಮಹಿಮೆತ್ ವಾಟೊ ಘೆವ್ಕ್ ತೊಚ್ ಅಮ್ಕಾ ಹೊತ್ತೊ ಎಕ್ ಬರೊಸೊ. ಅಧ್ಯಾಯವನ್ನು ನೋಡಿ |