ಕೊಲೊಸ್ಸೆಯವರಿಗೆ 2:2 - ಕನ್ನಡ ಸತ್ಯವೇದವು J.V. (BSI)2-3 ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರೆಲ್ಲರೂ ಆಂತರ್ಯದಲ್ಲಿ ಉತ್ತೇಜಿತರಾಗಿ ಪ್ರೀತಿಯಿಂದ ಒಂದಾಗಿರಬೇಕೆಂದು ಮತ್ತು ತಿಳುವಳಿಕೆಯಿಂದ ಬರುವ ದೃಢನಂಬಿಕೆಯಲ್ಲಿ ಶ್ರೀಮಂತರಾಗಿರಬೇಕೆಂದು ಆಶಿಸುತ್ತೇನೆ. ಅಂದರೆ ದೇವರ ನಿಗೂಢ ಸತ್ಯವನ್ನು ಅವರು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಸ್ವತಃ ಕ್ರಿಸ್ತನೇ ಆ ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕಶೆ ಮಟ್ಲ್ಯಾರ್, ತೆನಿ ಸಗ್ಳೆ ಭುತ್ತುರ್ಲ್ಯಾ ಮನಾತ್ ಉಮ್ಮೆದಿನ್ ಭುರುನ್ ಪ್ರೆಮಾನ್ ಎಕ್ ಹೊವ್ಚೆ ಅನಿ ಖರ್ಯಾ ಸಮ್ಜನಿಕ್ನಾ ಯೆತಲ್ಯಾ ಘಟ್ಟ್ ವಿಶ್ವಾಸಾತ್ ಸಾವ್ಕಾರ್ ಹೊವ್ಚೆ ಮನುನ್ ಆಶಾ ಕರ್ತಾ, ಮಟ್ಲ್ಯಾರ್, ದೆವಾಚೆ ಮೊಟೆ ಖರೆ ತೆನಿ ಫುರಾ ಕಳ್ವುನ್ ಘೆವ್ಚೆ; ಕ್ರಿಸ್ತುಚ್ ತೆ ಖರೆ. ಅಧ್ಯಾಯವನ್ನು ನೋಡಿ |
ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.