Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:11 - ಕನ್ನಡ ಸತ್ಯವೇದವು J.V. (BSI)

11 ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹ್ಯಾ ನ್ಹವ್ಯಾ ಜಿವನಾತ್ ಗ್ರಿಕ್ ಅನಿ ಜುದೆವಾಂಚ್ಯಾ ಮದ್ದಿ, ನಾತರ್ ಸುನ್ನತ್ ಕರುನ್ ಘೆಟಲ್ಲ್ಯಾಚ್ಯಾ ಅನಿ ಕರುನ್ ಘೆವ್ಕ್ ನಸಲ್ಲ್ಯಾಚ್ಯಾ ಮದ್ದಿ ಹೊಂವ್ದಿತ್, ನಾತರ್ ವಳಕ್ ನತ್ತೊ ಅನಿ ವಳಕ್ ಹೊತ್ತೊ, ಸ್ವತಂತ್ರ್ ಅನಿ ಗುಲಾಮ್, ಹೆಂಚ್ಯಾ ಮದ್ದಿ ಹೊಂವ್ದಿತ್ ಕಸ್ಲೊಬಿ ಭೆದ್ ಭಾವ್ ನಾ, ಕ್ರಿಸ್ತುಚ್ ಸಗ್ಳೆ ಅನಿ ಸಗ್ಳ್ಯಾಕ್ಡೆ ರ್‍ಹಾತಲೊಬಿ ತೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:11
54 ತಿಳಿವುಗಳ ಹೋಲಿಕೆ  

ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ಈ ವಿಷಯದಲ್ಲಿ ಯೆಹೂದ್ಯನಿಗೂ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತ; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವವನಾಗಿದ್ದಾನೆ.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ಸಭೆಯು ಆತನ ದೇಹವಾಗಿದೆ; ಎಲ್ಲವನ್ನೂ ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳದ್ದಾಗಿದೆ.


ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು. ದೇವರು ಒಬ್ಬನೇ ಆಗಿರಲಾಗಿ ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ; ದೇವರ ಕಟ್ಟಳೆಗಳನ್ನು ಅನುಸರಿಸಿ ನಡೆಯುವದೇ ಪ್ರಯೋಜನವಾಗಿದೆ.


ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಮತ್ತು ನೀವು ಆತನಲ್ಲಿದ್ದುಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.


ಗ್ರೀಕರಿಗೂ ಇತರ ಜನಗಳಿಗೂ ಜ್ಞಾನಿಗಳಿಗೂ ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲೆ ಅದೆ.


ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ - ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ಮಾಡಿದ ಉಪಕಾರವು ಅಷ್ಟಿಷ್ಟಲ್ಲ. ಮಳೆಯು ಆಗಲೇ ಹೊಯ್ಯುತ್ತಿದ್ದರಿಂದಲೂ ಚಳಿಯಾಗಿರುವದರಿಂದಲೂ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು; ಲೋರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅವ್ಮಿುಗೆ ನೀನು ನನ್ನ ಪ್ರಜೆಯೇ ಎಂದು ಹೇಳುವೆನು; ಅವರು ನನ್ನನ್ನು ನನ್ನ ದೇವರೇ ಎಂದು ಭಜಿಸುವರು.


ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವದು. ಯಾಹುವಿಗೆ ಸ್ತೋತ್ರ!


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಯಾಕಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು; ಮಾತಾಡುವವನು ನನಗೆ ಅನ್ಯದೇಶದವನಂತಿರುವನು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ನಿಮಗೂ ನಿಮ್ಮ ಮಧ್ಯದಲ್ಲಿ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಾಯೇಲ್ಯರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು.


ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು