Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:15 - ಕನ್ನಡ ಸತ್ಯವೇದವು J.V. (BSI)

15 ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕ್ರಿಸ್ತ್ ದಿತಲೆ ಶಾಂತ್ಪಾನ್, ತುಮ್ಚ್ಯಾ ಚಿಂತ್ಪಾಕ್ನಿ ಹತೊಟಿತ್ ಥವ್ನ್ ಘೆಂವ್ದಿತ್, ತುಮಿ ಸಗ್ಳೆ ಎಕುಚ್ ಆಂಗಾಕ್ ಮಿಳಲ್ಲೆ ಹೊಲ್ಲ್ಯಾಸಾಟ್ನಿ, ಶಾಂತ್ಪಾನಾನ್ ರ್‍ಹಾವ್ಕ್ ಬಲ್ವುನ್ ಹೊಲ್ಯಾಸಿ, ಸದಾ ಸರ್ವತಾಕ್ ಧನ್ಯಾವಾದ್ ದಿತಲೆ ಹೊವ್ನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:15
35 ತಿಳಿವುಗಳ ಹೋಲಿಕೆ  

ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ; ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿ ಬಂದ ದೇವರ ಚಿತ್ತ.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು


ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡ ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡುವದು.


ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ನಾನು ನಿನಗೆ ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.


ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವಿಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಬೋಧಿಸುತ್ತೇನೆ.


ಆತನಲ್ಲಿ ಬೇರೂರಿಕೊಂಡು ಭಕ್ತಿವೃದ್ಧಿಯನ್ನು ಹೊಂದಿ ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರಮಾಡುವವರಾಗಿರಿ.


ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಆಮೆನ್. ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಶಕ್ತಿಯೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.


ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ಕೃತಜ್ಞತಾಯಜ್ಞಗಳನ್ನು ಸಮರ್ಪಿಸಿ ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.


ಕೃತಜ್ಞತಾಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ ಕೀರ್ತನೆಯೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರ ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ.


ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


ಆದರೆ ಕ್ರಿಸ್ತನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿಹೋಗಲಿ; ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.


ಬೇಡವಾದರೆ ಆ ಶತ್ರುಗಳು ನನ್ನ ಬಲವನ್ನು ಶರಣುಹೊಂದಲಿ, ನನ್ನ ಸಂಗಡ ಸಮಾಧಾನಕ್ಕೆ ಬರಲಿ, ನನ್ನೊಡನೆ ಸಂಧಿಮಾಡಿಕೊಳ್ಳಲಿ.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ರೊಟ್ಟಿಯು ಒಂದೇಯಾಗಿರುವದರಿಂದ ಅನೇಕರಾಗಿರುವ ನಾವು ಒಂದೇ ದೇಹದಂತಿದ್ದೇವೆ; ಯಾಕಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುತಕ್ಕೊಂಡು ತಿನ್ನುತ್ತೇವೆ.


ಕ್ರಿಸ್ತ ನಂಬಿಕೆಯುಳ್ಳವರು ಮಾಡತಕ್ಕ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿ ದೇವರು ನಿನ್ನನ್ನು ಕರೆದನು, ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು