Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:4 - ಕನ್ನಡ ಸತ್ಯವೇದವು J.V. (BSI)

4 ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಚ್ಯಾ ದೆವಾಚ್ಯಾ ಅನಿ ಬಾಬಾಚ್ಯಾ ಇಚ್ಛ್ಯಾ ಸಾರ್ಕೆ ಹ್ಯಾ ಬುರ್ಶ್ಯಾ ಕಾಲಾತ್ನಾ ಅಮ್ಕಾ ಸ್ವತಂತ್ರ್ ಕರುಸಾಟ್ನಿ ಕ್ರಿಸ್ತಾನ್ ಅಮ್ಚ್ಯಾ ಪಾಪಾಚ್ಯಾಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:4
56 ತಿಳಿವುಗಳ ಹೋಲಿಕೆ  

ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.


ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಪ್ರಭಾವ. ಆಮೆನ್.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಪವಿತ್ರಾತ್ಮವರದಲ್ಲಿ ಪಾಲುಗಾರರಾಗಿ ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಮಹತ್ವವನ್ನೂ ಅನುಭವಿಸಿದವರು ಭ್ರಷ್ಟರಾದರೆ


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಈಗ ಈ ಲೋಕಕ್ಕೆ ತೀರ್ಪು ಆಗುತ್ತದೆ; ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ನಾವು ಪ್ರಸ್ತಾಪಿಸುವ ಮುಂದಣ ಸಾಮ್ರಾಜ್ಯವನ್ನು ಆತನು ದೇವದೂತರಿಗೆ ಅಧೀನ ಮಾಡಲಿಲ್ಲವಲ್ಲಾ.


ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸುವೂ ನಮಗೆ ನಿಮ್ಮ ಬಳಿಗೆ ಬರುವದಕ್ಕೆ ಮಾರ್ಗವನ್ನು ಸರಾಗಮಾಡಲಿ.


ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ಮೊಣಕಾಲೂರಿ - ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತವೇ ಆಗಲಿ ಅಂದನು.


ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ ಅಂದೆನು.


ಇವುಗಳಾದ ಮೇಲೆ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ನಿಂತಿರುವದನ್ನು ಕಂಡೆನು. ಅವರು ಸಕಲ ಜನಾಂಗಕುಲ ಪ್ರಜೆಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಈ ದಿನಗಳು ಕೆಟ್ಟವುಗಳಾಗಿವೆ; ಆದದರಿಂದ ಕಾಲವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು