Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:14 - ಕನ್ನಡ ಸತ್ಯವೇದವು J.V. (BSI)

14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:14
30 ತಿಳಿವುಗಳ ಹೋಲಿಕೆ  

ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ.


ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.


ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.


ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.


ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು; ವಕ್ರಮಾರ್ಗಿಯು ಬೈಲಿಗೆ ಬೀಳುವನು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ಯಥಾರ್ಥವಾಗಿ ಬಗೆಹರಿಸುವದುಂಟೋ?


ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.


ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡಲಿಲ್ಲ.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಕ್ಕೆ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿದರು.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯನ್ನು ಹಿಡಿದಿರುವದಕ್ಕೆ ಆಶ್ಚರ್ಯಪಡುತ್ತೇನೆ.


ಮೂರು ವರುಷಗಳಾದ ಮೇಲೆ ಕೇಫನ ಪರಿಚಿತಿಯನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇವಿುಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು