Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:20 - ಕನ್ನಡ ಸತ್ಯವೇದವು J.V. (BSI)

20 ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ಅತ್ತಾ ಜಿವನ್ ಕರುಕ್ ಲಾಗ್ಲಾ ತೊ ಮಿಯಾ ನ್ಹಯ್, ಕ್ರಿಸ್ತುಚ್ ಮಾಜ್ಯಾ ಭುತ್ತುರ್ ಜಿವನ್ ಕರುಕ್ ಲಾಗ್ಲಾ, ಶಾರಿರಿಕ್ ರಿತಿಚೆ ಜಿವನ್ ಮಿಯಾ ಕರುಕ್ ಲಾಗ್ಲಾ ತೆ ಮಿಯಾ ದೆವಾಚ್ಯಾ ಲೆಕಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾ ವೈನಾ ಜಿವನ್ ಕರುಕ್ ಲಾಗ್ಲಾ. ತೆನಿ ಮಾಜೊ ಪ್ರೆಮ್ ಕರ್‍ಲ್ಯಾನ್ ಅನಿ ಮಾಜ್ಯಾ ಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:20
65 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.


ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಕ್ರಿಸ್ತನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬದು ನಿಮ್ಮನ್ನು ಕುರಿತು ನಿಮಗೆ ಚೆನ್ನಾಗಿ ತಿಳಿಯುವದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರೇ.


ಇದು ಮಾತ್ರವಲ್ಲದೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು ದುಷ್ಟತ್ವವನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು ನಿಮ್ಮ ಅಂಗಗಳನ್ನು ನೀತಿ ಕೃತ್ಯಗಳನ್ನು ನಡಿಸುವ ಸಾಧನಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು.


ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ಇದಲ್ಲದೆ ಕರ್ಮಮಾರ್ಗದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ ನೀತಿವಂತನು ನಂಬಿಕೆಯಿಂದಲೇ ಬದುಕುವನೆಂದು ಬರೆದದೆ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಅನ್ಯಜನಗಳ ವಿಷಯವಾದ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ ತಿಳಿಸಲಿಕ್ಕೆ ಮನಸ್ಸು ಮಾಡಿಕೊಂಡನು. ಈ ಮರ್ಮವು ಏನಂದರೆ ಕ್ರಿಸ್ತನು ನಿಮ್ಮಲ್ಲಿದ್ದು ಪ್ರಭಾವದ ನಿರೀಕ್ಷೆಗೆ ಆಧಾರಭೂತನಾಗಿರುವದೇ.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಕ್ರಿಸ್ತನು ನನ್ನಲ್ಲಿ ಮಾತಾಡುತ್ತಾನೆಂಬದಕ್ಕೆ ನಿಮಗೆ ಬೇಕಾದ ಪ್ರಮಾಣವು ಆಗ ತೋರಿಬರುವದು. ಆತನು ನಿಮ್ಮನ್ನು ಕುರಿತು ನಿರ್ಬಲನಾಗಿರದೆ ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ಜೀವ ಸ್ವರೂಪನಾದ ತಂದೆಯು ನನ್ನನ್ನು ಕಳುಹಿಸಿಕೊಟ್ಟಿರಲಾಗಿ ನಾನು ತಂದೆಯಿಂದ ಜೀವಿಸುತ್ತೇನೆ; ಅದರಂತೆ ನನ್ನನ್ನು ತಿನ್ನುವವನೇ ನನ್ನಿಂದ ಜೀವಿಸುವನು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವದೂ ಇಲ್ಲ.


ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.


ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.


ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು.


ಅದಕ್ಕೆ ನತಾನಯೇಲನು - ಗುರುವೇ, ನೀನು ದೇವಕುಮಾರನು ಸರಿ; ನೀನೇ ಇಸ್ರಾಯೇಲಿನ ಅರಸನು ಅಂದನು.


ನಾವು ನಂಬಿಕೆಯ ವಿಷಯದಲ್ಲಿಯೂ ನಿಮ್ಮ ಮೇಲೆ ದೊರೆತನಮಾಡುವವರೆಂದು ನನ್ನ ತಾತ್ಪರ್ಯವಲ್ಲ; ನಿಮ್ಮ ಸಂತೋಷಕ್ಕೆ ನಾವು ಸಹಾಯಕರಾಗಿದ್ದೇವೆ; ನಂಬಿಕೆಯ ವಿಷಯದಲ್ಲಿ ದೃಢ ನಿಂತಿದ್ದೀರಿ.


ಮುಂದೆ ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದು ತಡಮಾಡದೆ ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವದಕ್ಕೆ ಪ್ರಾರಂಭಮಾಡಿದನು.


ಪುರುಷರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವಾದದರಿಂದ ದೇಹದಲ್ಲಿ ವಾಸಿಸುವವರೆಗೂ ಕರ್ತನಿಗೆ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆಂಬದನ್ನು ಬಲ್ಲೆವು.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;


ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -


ನಾನು ನನ್ನ ನಲ್ಲನವಳೇ, ಅವನ ಆಶೆಯು ನನ್ನ ಮೇಲೇ ಇದೆ.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿದೆ.


ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.


ಕರ್ತನ ಸಂಸರ್ಗದಲ್ಲಿರುವವನಾದರೋ ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.


ನನಗಂತೂ ಬದುಕುವದಂದರೆ ಕ್ರಿಸ್ತನೇ, ಸಾಯುವದು ಲಾಭವೇ.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರುತ್ತಾನಷ್ಟೆ ; ಆದದರಿಂದ ಸಮರ್ಪಿಸುವದಕ್ಕೆ ಈ ಮಹಾಯಾಜಕನಿಗೂ ಏನಾದರೂ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು