Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:4 - ಕನ್ನಡ ಸತ್ಯವೇದವು J.V. (BSI)

4 ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಉಲ್ಲ್ಯಾಕ್ನಿ ತೆಕಾ ಸುನ್ನತ್ ಕರ್‍ತಲೆ ಪಾಜೆ ಹೊತ್ತೆ, ಅಮ್ಚಿಚ್ ಭಾವಾ ಮನುನ್ ಸಾಂಗುನ್ ಚೊರಿನ್ ಅಮ್ಚ್ಯಾ ತಾಂಡ್ಯಾತ್ ಗುಸಲ್ಲಿ ಝುಟಿ ಲೊಕಾ, ಹೆನಿ ಜೆಜು ಕ್ರಿಸ್ತಾಚ್ಯಾ ವೈನಾ ಅಮಿ ಜೊಡುನ್ ಘೆತಲ್ಯಾ ತ್ಯಾ ಸುಟ್ಕಾತ್ನಾ ಕಾಡುನ್ ಅಮ್ಕಾ ಗುಲಾಮ್ಪಾನಾತ್ ಲೊಟುನ್ ಘಾಲುಚೆ ಮನುನ್ ಚಿಂತಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:4
29 ತಿಳಿವುಗಳ ಹೋಲಿಕೆ  

ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.


ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಫೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಇವರೊಳಗೆ ಸೇರಿದವರೇ.


ನನಗಂತೂ ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ಭರವಸ ಉಂಟು. ನಿಮ್ಮಲ್ಲಿ ಭೇದವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ ಬರುವ ದಂಡನೆಯನ್ನು ಅನುಭವಿಸುವನು.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.


ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.


ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವ್ಯತ್ಯಾಸ ಬೋಧನೆಗಳನ್ನು ಮಾಡಿ ಯೇಸುವಿನ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.


ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.


ಸ್ವತಂತ್ರರಂತೆ ನಡೆದುಕೊಳ್ಳಿರಿ; ಆದರೆ ಕೆಟ್ಟತನವನ್ನು ಮರೆಮಾಜುವದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ;


ಹಾಗರ್ ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತ. ಅವಳು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆ ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.


ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವನಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದ್ದರಿಂದ ಆಟಂಕವಿಲ್ಲದೆ ನಡೆಯುವೆನು.


ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಅಪೇಕ್ಷಿಸುತ್ತಾ ಇದ್ದಾರೆ.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು