Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:13 - ಕನ್ನಡ ಸತ್ಯವೇದವು J.V. (BSI)

13 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಸರಾಪಾತ್ ಹೊತ್ತ್ಯಾ ಅಮ್ಕಾ ಖಾಯ್ದ್ಯಾನ್ ಹಾನ್ತಲ್ಯಾ ಸರಾಪಾತ್ನಾ ಸೊಡ್ವುಸಾಟ್ನಿ; ಕ್ರಿಸ್ತಾನ್ ತೊ ಸರಾಪ್ ಅಪ್ನಾ ವರ್‍ತಿ ಘೆಟ್ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನಾಕ್ ಝಾಡಾಕ್ ಲೊಂಬಾತ್ ಘಾಟಲ್ಲೆ ಹಾಯ್ ತೊ ದೆವಾಚ್ಯಾ ಸರಾಪಾತ್ ಹಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:13
43 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವದಕ್ಕಾಗಿ ಒಂದೇ ಸಾರಿ ಪಾಪನಿವಾರಣಕ್ಕೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧದಲ್ಲಿ ಕೊಲ್ಲಲ್ಪಟ್ಟನು, ಆತ್ಮಸಂಬಂಧದಲ್ಲಿ ತಿರಿಗಿ ಬದುಕುವವನಾದನು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ನಾನು ಈ ದೇಶವನ್ನೂ ನಿವಾಸಿಗಳನ್ನೂ ಶಾಪ ವಿಸ್ಮಯಗಳಿಗೆ ಗುರಿಮಾಡುವೆನೆಂಬದನ್ನು ನೀನು ಕೇಳಿದಾಗ ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ - ಅಗೋ, ಆ ಏಲಾಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವದನ್ನು ಕಂಡೆನು ಎಂದು ಹೇಳಲು ಯೋವಾಬನು ಅವನಿಗೆ -


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.


ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು - ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವದನ್ನು ಕೊಟ್ಟರೆ ನೀವು ಯೆಹೋವನ ಸ್ವಾಸ್ತ್ಯವನ್ನು ಆಶೀರ್ವದಿಸುವಿರಿ ಎಂದು ಕೇಳಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್‍ಕೋಟೆಯಲ್ಲಿ ಪ್ರಕಟವಾಯಿತು. ಮತ್ತು ಹಾಮಾನನ ಹತ್ತು ಮಂದಿ ಮಕ್ಕಳನ್ನು ಗಲ್ಲಿಗೆ ಹಾಕಿದರು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು