Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:16 - ಕನ್ನಡ ಸತ್ಯವೇದವು J.V. (BSI)

16 ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾನ್ ಅಬ್ರಾಹಾಮಾಕ್ ಅನಿ ತೆಚ್ಯಾ ಪಿಳ್ಗಿಕ್ ಗೊಸ್ಟಿಯಾ ದಿಲ್ಯಾನ್, ಪವಿತ್ರ್ ಪುಸ್ತಕ್ ಪಿಳ್ಗಿಯಾಕ್ನಿ ಮನುನ್ ಸಾಂಗಿನಾ ತಸೆ ಮಟ್ಲ್ಯಾರ್ ಲೈ ಲೊಕಾ ಮನುನ್ ಹೊತಾ ಖರೆ ತೆ “ಪಿಳ್ಗಿಕ್” ಮನ್ತಾ, ಕಶ್ಯಾಕ್ ಮಟ್ಲ್ಯಾರ್ ತೊ ಎಕ್ಲ್ಯಾಕುಚ್ ದಾಕ್ವುತಾ, ತೊ ಎಕ್ಲೊ ಕೊನ್ ಮಟ್ಲ್ಯಾರ್ ಕ್ರಿಸ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:16
28 ತಿಳಿವುಗಳ ಹೋಲಿಕೆ  

ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ನೀವು ಪ್ರವಾದಿಗಳ ಶಿಷ್ಯರೂ ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ - ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ನೀವು ಕ್ರಿಸ್ತನ ದೇಹವು, ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿರುವದೋ, ಹಾಗೆಯೇ ಕ್ರಿಸ್ತನು.


ಹಾಗೆಯೇ ನಾವೆಲ್ಲರು ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ಪರಸ್ಪರ ಅಂಗಗಳಾಗಿದ್ದೇವೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಾ ಇದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು.


ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು;


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವ ತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇವಿುಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು