Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:8 - ಕನ್ನಡ ಸತ್ಯವೇದವು J.V. (BSI)

8 ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮುಂಚೆ ನೀವು ದೇವರನ್ನು ಅರಿಯದವರಾಗಿದ್ದಾಗ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ನೀವು ಗುಲಾಮರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಫಾಟಿ ತುಮ್ಕಾ ದೆವಾಚಿ ವಳಕ್ ನತ್ತಿ, ಅನಿ ತುಮಿ ಸ್ವಭಾವಾನ್ ದೆವ್ ನ್ಹಯ್ ಹೊತ್ತ್ಯಾಕ್ನಿ ಗುಲಾಮಾ ಹೊವ್ನ್ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:8
31 ತಿಳಿವುಗಳ ಹೋಲಿಕೆ  

ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ಮಾಡಿಕೊಂಡಿರಲ್ಲಾ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ನೀವು ಅಜ್ಞಾನಿಗಳಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕ ವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ.


ಬಾರ್ನಬನನ್ನು ದ್ಯೌಸ್‍ದೇವರೆಂತಲೂ ಪೌಲನು ಮಾತಾಡುವದರಲ್ಲಿ ಮುಖ್ಯನಾದ್ದರಿಂದ ಅವನನ್ನು ಹೆರ್ಮೆದೇವರೆಂತಲೂ ಅಂದುಕೊಂಡರು.


ಆತನು ಲೋಕದಲ್ಲಿ ಇದ್ದನು; ಮತ್ತು ಲೋಕವು ಆತನ ಮೂಲಕವಾಗಿ ಉಂಟಾಯಿತು; ಆದರೂ ಲೋಕವು ಆತನನ್ನು ಅರಿಯಲಿಲ್ಲ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ಲಯವಿಲ್ಲದ ದೇವರ ಮಹಿಮೆಯನ್ನು ಬಿಟ್ಟು ಅದಕ್ಕೆ ಬದಲಾಗಿ ಲಯವಾಗುವ ಮನುಷ್ಯ ಪಶು ಪಕ್ಷಿ ಸರ್ಪಾದಿಗಳ ಮೂರ್ತಿಯನ್ನು ಮಾಡಿಕೊಂಡರು.


ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.


ಮನುಷ್ಯಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.)


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು