Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:9 - ಕನ್ನಡ ಸತ್ಯವೇದವು J.V. (BSI)

9 ಈಗಲಾದರೋ ನೀವು ದೇವರನ್ನು ತಿಳುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ. ಹೀಗಿರಲಾಗಿ ನೀವು ಕೆಲಸಕ್ಕೆ ಬಾರದ ದರಿದ್ರಬಾಲಬೋಧೆಗೆ ಮತ್ತೂ ಅಧೀನರಾಗಬೇಕೆಂದು ಅಪೇಕ್ಷಿಸಿ ಪುನಃ ಅದಕ್ಕೆ ತಿರುಗಿಕೊಳ್ಳುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಗಲಾದರೋ ಸತ್ಯದೇವರನ್ನು ತಿಳಿದಿದ್ದೀರಿ. ನಿಜವಾಗಿ ಹೇಳಬೇಕಾದರೆ, ನಿಮ್ಮನ್ನು ತಿಳಿದಿರುವಾತನು ದೇವರೇ. ಹೀಗಿರಲಾಗಿ ಮೊದಲು ನೀವು ಅನುಸರಿಸುತ್ತಿದ್ದ ಬಲಹೀನವೂ ನಿರುಪಯುಕ್ತವೂ ಆದ ನಿಯಮಗಳಿಗೆ ನೀವು ಯಾಕೆ ಹಿಂತಿರುಗಬೇಕು? ಅವುಗಳಿಗೆ ಮತ್ತೆ ಗುಲಾಮರಾಗಬೇಕೆಂದಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅತ್ತಾ ತರಿಬಿ ಖರ್‍ಯಾ ದೆವಾಕ್ ಕಳ್ವುನ್ ಘೆಟ್ಲ್ಯಾಶಿ, ಖರೆ ಸಾಂಗುಚೆ ಹೊಲ್ಯಾರ್ ತುಮ್ಕಾ ಕಳ್ವುನ್ ಘೆಟಲ್ಲೆ ದೆವಾನುಚ್, ಅಶೆ ರ್‍ಹಾತಾನಾ, ತುಮಿ ಅದ್ದಿಚ್ಯಾನ್ ಪಾಳುನ್ಗೆತ್ ಯೆಲ್ಲ್ಯಾ ಬಳ್ ನಸಲ್ಲ್ಯಾ ಅನಿ ಫಾಯ್ದ್ಯಾಕ್ ಪಡಿನಸಲ್ಲ್ಯಾ ನೆಮಾಕ್ನಿ ಕಶ್ಯಾಕ್ ಫಾಟಿ ಪರ್ತುನ್ ಜಾವ್ಚೆ? ತೆಂಕಾ ಅನಿಪರ್ತುನ್ ಗುಲಾಮ್ ಹೊವ್ಚೆ ಮನುನ್ ಕರ್ಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:9
30 ತಿಳಿವುಗಳ ಹೋಲಿಕೆ  

ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳುಕೊಳ್ಳುತ್ತಾನೆ.


ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಬಹಿರಾಚಾರಗಳಿಂದ ಸಿದ್ಧಿಗೆ ಬರಬೇಕೆಂದಿದ್ದೀರಾ?


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ಯಾಜಕನಾಗಿದ್ದೀ ಎಂದು ಹೇಳಿಯದೆಯಲ್ಲಾ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು.


ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು.


ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.


ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವದು.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಆಗ ನೀನು ಯೆಹೋವನ ಭಯವನ್ನು ಅರಿತು ದೈವಜ್ಞಾನವನ್ನು ಪಡೆದುಕೊಳ್ಳುವಿ.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು