Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:22 - ಕನ್ನಡ ಸತ್ಯವೇದವು J.V. (BSI)

22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ದೆವಾಚ್ಯಾ ಆತ್ಮ್ಯಾಕ್ನಾ ಯೆತಲೆ ಫಳ್ ಕಾಯ್ ಮಟ್ಲ್ಯಾರ್, ಪ್ರೆಮ್, ಕುಶಿ, ಸಮಾಧಾನ್, ಸೊಸುನ್‍ ಘೆತಲೆ, ಬರೆಪಾನ್ , ಮಜತ್, ವಿಶ್ವಾಸ್ಪಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:22
44 ತಿಳಿವುಗಳ ಹೋಲಿಕೆ  

ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿರಿ. ದೇವರಿಗೆ ಫಲವಾಗುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಮರ ಒಳ್ಳೇದಂದರೆ ಅದರ ಫಲವೂ ಒಳ್ಳೇದನ್ನಿರಿ. ಮರ ಹುಳುಕು ಅಂದರೆ ಅದರ ಫಲವೂ ಹುಳುಕು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವದು.


ಹೀಗಿರುವದರಿಂದ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ನೀವು ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.


ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ನನ್ನ ಸಹೋದರರೇ, ನೀವಂತೂ ಒಳ್ಳೇತನದಿಂದ ಭರಿತರಾಗಿಯೂ ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ಗೊತ್ತಿದೆ.


ಮುಂದೆ ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು ಎಂದು ಉತ್ತರಕೊಟ್ಟನು.


ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು; ಚಾಡಿ ಹೇಳುವವರಾಗಿರದೆ ಮದ್ಯಾಸಕ್ತಿಯಿಲ್ಲದವರಾಗಿಯೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.


ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ; ಎಲ್ಲರಲ್ಲಿ ಕ್ರಿಸ್ತ ನಂಬಿಕೆಯಿಲ್ಲವಲ್ಲಾ.


ಆದಿಗಿಂತ ಅಂತ್ಯವು ಲೇಸು; ಹಮ್ಮುಗಾರನಿಗಿಂತ ತಾಳ್ಮೆಯುಳ್ಳವನು ಉತ್ತಮ.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಪವಿತ್ರಾತ್ಮನನ್ನನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲೀಯವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿವಿುತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿವಿುತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು