Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:1 - ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚ್ಯಾ ಮದ್ದಿ ಕೊನ್‍ ತರ್ಬಿ ಎಕ್ಲೊ ಕಸ್ಲ್ಯಾಬಿ ಚುಕೆತ್ ಪಡಲ್ಲೊ ಗಾವ್ಲ್ಯಾರ್, ಆತ್ಮಿಕ್ ರಿತಿಚೆ ತುಮಿ ಜಾವ್ನ್ ತೆಂಕಾ ಸಮಾ ಕರುಚೆ. ಖರೆ ತುಮಿ ಶಾಂತ್ಪಾನಾನ್ ನಾತರ್ ಸಮಾಧಾನಾನ್ ತೆ ಕರುಚೆ, ಅನಿ ತುಮ್ಚ್ಯಾ ವರ್‍ತಿ ಎಕ್ ನದರ್ ರ್‍ಹಾಂವ್ದಿತ್ ಕಶ್ಯಾಕ್ ಮಟ್ಲ್ಯಾರ್ ತುಮಿ ಪರಿಕ್ಷಾತ್ ಪಡ್ತಲೆ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:1
41 ತಿಳಿವುಗಳ ಹೋಲಿಕೆ  

ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.


ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.


ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.


ಅವರ ಬೆದರಿಸುವಿಕೆಗೆ ಹೆದರದೆ ಕಳವಳಪಡದೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರಿ; ಆದರೆ ಅದನ್ನು ಸಾತ್ವಿಕತ್ವದಿಂದಲೂ ಮನೋಭೀತಿಯಿಂದಲೂ ಹೇಳಿರಿ.


ನಂಬಿಕೆಯಲ್ಲಿ ದೃಢವಿಲ್ಲದವರನ್ನೂ ಸೇರಿಸಿಕೊಳ್ಳಿರಿ. ಆದರೆ ಸಂದೇಹಾಸ್ಪದವಾದ ಕಾರ್ಯಗಳನ್ನು ಅವರ ಮುಂದೆ ಚರ್ಚಿಸಬೇಡಿರಿ.


ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯಭಾವದಿಂದಲೂ ಕೂಡಿದವನಾಗಿ ಬರಲೋ?


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ದೇವರಾತ್ಮನಿಂದ ನಡಿಸಲ್ಪಡುವವನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತನ ವಿಧಿಯೇ ಎಂದು ಚೆನ್ನಾಗಿ ತಿಳುಕೊಳ್ಳಲಿ.


ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ.


ದೇವರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನಾದರೂ ವಿಚಾರಿಸಿ ತಿಳಿಕೊಳ್ಳುವದಿಲ್ಲ.


ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಇಂಥವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವದಿಲ್ಲ.


ಅವನು ಒಂದು ದಿವಸ ಸಂಜೇ ಹೊತ್ತಿನಲ್ಲಿ ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿರುವಾಗ ಅಲ್ಲಿಂದ ಬಹುಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವದನ್ನು ಕಂಡನು.


ಸಹೋದರರೇ, ನಾನಂತೂ ದೇವರಾತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಲಾರದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತಾಡಬೇಕಾಯಿತು.


ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ಇತ್ತಲಾಗಿ ಪೇತ್ರನು ಹೊರಗೆ ಅಂಗಳದಲ್ಲಿ ಕೂತಿದ್ದನು. ಅಲ್ಲಿ ಒಬ್ಬ ದಾಸಿಯು ಅವನ ಬಳಿಗೆ ಬಂದು - ನೀನು ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು ಅನ್ನಲು ಅವನು -


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು