Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:10 - ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾರಿಗಾದರೂ ಒಳ್ಳೆಯದನ್ನು ಮಾಡಲು ಅವಕಾಶವಿರುವಾಗ ನಾವು ಮಾಡಲೇಬೇಕು. ಅದರಲ್ಲೂ ಒಂದೇ ಕುಟುಂಬದವರಂತಿರುವ ವಿಶ್ವಾಸಿಗಳ ಬಗ್ಗೆ ನಾವು ವಿಶೇಷವಾದ ಗಮನ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಚ್ಯಾಸಾಟ್ನಿ ಬರೆ ಕರ್‍ತಲೊ ಅವಕಾಸ್ ಅಮ್ಕಾ ಗಾವಲ್ಲ್ಯಾ ತನ್ನಾ; ಹರಿಎಕ್ಲ್ಯಾಕ್ ಬರೆ ಕರುಚೆ ಅನಿ ಲೈ ಕರುನ್ ಅಮ್ಚ್ಯಾ ವಿಶ್ವಾಸಾತ್ ಎಕ್ ಕುಟ್ಮಾಚ್ಯಾ ಸಾರ್ಕೆ ಹೊವ್ನ್ ಹೊತ್ತ್ಯಾಕ್ನಿ ಬರೆ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:10
38 ತಿಳಿವುಗಳ ಹೋಲಿಕೆ  

ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಉಪಕಾರಮಾಡುವದಕ್ಕೆ ನಿನ್ನ ಕೈಲಾದಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.


ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನನ್ನ ವಿಷಯವಾದ ನಿಮ್ಮ ಯೋಚನೆಯೆಂಬ ಬಳ್ಳಿಯು ಇಷ್ಟು ದಿವಸಗಳಾದ ಮೇಲೆ ಪುನಃ ಚಿಗುರಿದ್ದಕ್ಕೆ ನಾನು ಕರ್ತನ ನಿವಿುತ್ತ ಬಹಳವಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ನಿಜವಾಗಿ ಇರುತ್ತಿದ್ದರೂ ಇದುವರೆಗೆ ಅದರ ಪ್ರಕಾರ ಮಾಡುವದಕ್ಕೆ ಸಂದರ್ಭ ಸಿಕ್ಕಲಿಲ್ಲವೇನೋ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಈ ದಿನಗಳು ಕೆಟ್ಟವುಗಳಾಗಿವೆ; ಆದದರಿಂದ ಕಾಲವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿಕೊಳ್ಳಿರಿ.


ಯೇಸುವು ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ [ದೇಶದಲ್ಲಿ] ವಾಸವಾಗಿರುವಿ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಸಬ್ಬತ್‍ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ತೆಗೆಯುವದೋ? ಎಂದು ಹೇಳಲು ಅವರು ಸುಮ್ಮನಿದ್ದರು.


ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.


ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು ತಾನು ಹಾಳುಮಾಡುತ್ತಿದ್ದ ಮತವನ್ನು ಈಗ ಪ್ರಸಿದ್ಧಿಪಡಿಸುತ್ತಾನೆಂಬ


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ಆದರೆ ಎಲ್ಲವನ್ನೂ ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ;


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು ನಿನ್ನಲ್ಲಿರುವ ಸತ್ಯವನ್ನು ಕುರಿತು ತಿಳಿಸಿ ನೀನು ಸತ್ಯವಂತನಾಗಿ ನಡೆಯುವವನು ಎಂದು ಹೇಳುವಾಗ ನಾನು ಬಹಳ ಸಂತೋಷಪಡುತ್ತೇನೆ.


ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ತಾನು ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೇ ನಡತೆಯನ್ನು ಅನುಸರಿಸು;


ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು