Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 6:7 - ಕನ್ನಡ ಸತ್ಯವೇದವು J.V. (BSI)

7 ಮೋಸಹೋಗಬೇಡಿರಿ; ದೇವರು ತಿರಸ್ಕಾರ ಸಹಿಸುವವನಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋಸಹೋಗಬೇಡಿರಿ! ನೀವು ದೇವರನ್ನು ವಂಚಿಸಲು ಸಾಧ್ಯವಿಲ್ಲ. ಒಬ್ಬನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಕಾಚ್ ತುಮಿ ಪಸ್ವನಿತ್ ಪಡುಕ್ ದಿವ್ನಕಾಸಿ; ದೆವಾಕ್ ಕೊನ್‍ಬಿ ಎಡ್ಸಡುಕ್ ಹೊಯ್ನಾ. ಲೊಕಾ ಜೆ ಕಾಯ್ ಪೆರ್‍ತಾತ್ ತೆಚ್ ಕಾತರ್‍ತಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 6:7
28 ತಿಳಿವುಗಳ ಹೋಲಿಕೆ  

ಆದರೆ ಸ್ವಲ್ಪವಾಗಿ ಬಿತ್ತುವವನು ಪೈರನ್ನು ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು ಎಂದು ತಿಳುಕೊಳ್ಳಿರಿ.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.


ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.


ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಆದದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವದು.


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಅವನ ಮನಸ್ಸಿನಲ್ಲಿರುವದು ದ್ರೋಹವೇ; ಕೇಡನ್ನು ನಿರಂತರ ಕಲ್ಪಿಸುತ್ತಾನೆ. ಜಗಳದ ಬೀಜವನ್ನು ಬಿತ್ತುತ್ತಾನೆ.


ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.


ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಉನ್ನತಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ - ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು ಅಂದುಕೊಳ್ಳುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ;


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿದವನಾಗಿದ್ದಾನೆ.


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಮತ್ತು ಸತ್ಯವೆಂಬದು ನಮ್ಮಲ್ಲಿಲ್ಲ.


ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರಲ್ಲಾ.


ಅಸತ್ಯವಾಡುವ ಸುಳ್ಳುಸಾಕ್ಷಿ, ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು, ಈ ಏಳೇ.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಯೆಹೋವನು ಇಂತೆನ್ನುತ್ತಾನೆ - ಕಸ್ದೀಯರು ನಮ್ಮಿಂದ ತೊಲಗಿ ಹೋಗುವದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.


ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ; ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ ನಿಮ್ಮ ಶೂರರ ಬಾಹುಳ್ಯದಲ್ಲಿಯೂ ಭರವಸವಿಟ್ಟದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು