Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:1 - ಕನ್ನಡ ಸತ್ಯವೇದವು J.V. (BSI)

1 ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚೆಫನ್ಯನಿಗೆ ಯೆಹೋವನು ಕೊಟ್ಟ ಸಂದೇಶ. ಆಮೋನನ ಮಗನಾದ ಯೋಷೀಯನು ಯೆಹೂದ ಪ್ರಾಂತ್ಯದ ಅರಸನಾಗಿದ್ದಾಗ ಈ ಸಂದೇಶವು ಅವನಿಗೆ ದೊರಕಿತು. ಚೆಫನ್ಯನು ಕೂಷನ ಮಗನು; ಕೂಷನು ಗೆದಲ್ಯನ ಮಗನು; ಗೆದಲ್ಯನು ಅಮರ್ಯನ ಮಗನು; ಅಮರ್ಯನು ಹಿಜ್ಕೀಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:1
12 ತಿಳಿವುಗಳ ಹೋಲಿಕೆ  

ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಲ್ಲಿ ಯೆಹೋವನ ವಾಕ್ಯವು ಇವನಿಗೆ ಒದಗಿತು.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ ಯಾಜಕನೂ ಆದ ಯೆಹೆಜ್ಕೇಲನಿಗೆ ಸಾಕ್ಷಾತ್ತಾಗಿ ಒದಗಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.)


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ದೈವಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಶಿಕ್ಷೆಗೂ ಉಪಯುಕ್ತವಾಗಿದೆ.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಮನಸ್ಸೆಯು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಯೆಹೂದದ ಅರಸನಾದ ಯೋಷೀಯನ ಮಗನೂ ತನ್ನ ತಂದೆಯಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವದೇನಂದರೆ - ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು;


ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನಿಗೆ ಬದಲಾಗಿ ಅವನ ಮಗನಾದ ಯೋಷೀಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು