Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:11 - ಕನ್ನಡ ಸತ್ಯವೇದವು J.V. (BSI)

11 ಒರಳ ಕೇರಿಯವರೇ, ಕಿರಚಿರಿ, ಎಲ್ಲಾ ಸಾಹುಕಾರರು ಹಾಳಾದರು, ಹೊರೆಬೆಳ್ಳಿಯವರೆಲ್ಲರು ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಗರದ ಕೆಳಗಿನ ಭಾಗದಲ್ಲಿರುವವರೇ, ನೀವು ಅಳುವಿರಿ. ಯಾಕೆಂದರೆ ನಿಮ್ಮಲ್ಲಿರುವ ಧನಿಕರೂ ವ್ಯಾಪಾರಸ್ತರೂ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:11
16 ತಿಳಿವುಗಳ ಹೋಲಿಕೆ  

ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಅಮಲೇರಿದವರೇ, ಎಚ್ಚರಗೊಳ್ಳಿರಿ, ಅಳಿರಿ; ಕುಡಿಕರೇ, ಅರಚಿಕೊಳ್ಳಿರಿ; ದ್ರಾಕ್ಷಾರಸವು ನಿಮ್ಮ ಬಾಯಿಗೆ ಇನ್ನು ಬೀಳದು.


ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.


ಇದರ ನಿವಿುತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಹಲುಬಿ ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.


ಅವನು ಬೆಳ್ಳಿಯನ್ನು ದೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ


ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು