Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 1:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 1:14
31 ತಿಳಿವುಗಳ ಹೋಲಿಕೆ  

ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಇಗೋ, ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ; ಸಮಾಧಾಯಕ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.


ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ; ಇವುಗಳ ರೋದನವು ಯಹಜಿನವರೆಗೂ ಕೇಳಬರುತ್ತದೆ; ಇದರಿಂದ ಮೋವಾಬಿನ ಭಟರು ಕಿರಚಿಕೊಳ್ಳುತ್ತಾರೆ; ಅದರ ಆತ್ಮವು ತನ್ನೊಳಗೆ ತತ್ತರಿಸುತ್ತದೆ.


ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅದೇ ದಿನದಲ್ಲಿ ಮೀನುಬಾಗಿಲಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿಂದ ಧಡಮ್ ಎನ್ನುವ ಶಬ್ದ, ಅಂತು ದೊಡ್ಡ ಗದ್ದಲವಾಗುವದು; ಇದು ಯೆಹೋವನ ನುಡಿ.


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು;


ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಗಾದೆಯನ್ನು ನಿಲ್ಲಿಸಿ ಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ - ಕ್ಲುಪ್ತಕಾಲವು ಹತ್ತಿರಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವದು ಸಮೀಪ.


ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರವಿುಸಿದ್ದಾನೆ; ಆ ದಿನದಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ಮಣಿಗಳ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ಆತನ ಧ್ವನಿಯು ಆ ಕಾಲದಲ್ಲಿ ಭೂವಿುಯನ್ನು ಕದಲಿಸಿತು; ಈಗಲಾದರೋ ಆತನು - ಇನ್ನೊಂದೇ ಸಾರಿ ನಾನು ಭೂವಿುಯನ್ನು ಮಾತ್ರವಲ್ಲದೆ ಪರಲೋಕವನ್ನೂ ನಡುಗಿಸುವೆನೆಂದು ವಾಗ್ದಾನಮಾಡಿದ್ದಾನೆ.


ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.


ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.


ಆಹಾ, ತೀರ್ಪಿನ ತಗ್ಗಿನಲ್ಲಿ ಗುಂಪು ಗುಂಪು! ತೀರ್ಪಿನ ತಗ್ಗಿನಲ್ಲಿ ಯೆಹೋವನ ದಿನವು ಸಮೀಪಿಸಿದೆ.


ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನು ಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತುಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು