ಚೆಫನ್ಯ 1:7 - ಕನ್ನಡ ಸತ್ಯವೇದವು J.V. (BSI)7 ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ. ಅಧ್ಯಾಯವನ್ನು ನೋಡಿ |