Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಚೆಫನ್ಯ 3:1 - ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಅವಿಧೇಯವೂ ಮಲಿನವೂ ಆದ ಹಿಂಸಕ ನಗರಿಯ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಚೆಫನ್ಯ 3:1
17 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಹೀಗೆ ಹೇಳಿದ್ದಾನೆ - ಸುತ್ತಣ ಮರಗಳನ್ನು ಕಡಿದುಬಿಡಿರಿ, ಯೆರೂಸಲೇವಿುನೆದುರಿಗೆ ದಿಬ್ಬ ಹಾಕಿರಿ; ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದೋಚಾಟವೇ ತುಂಬಿದೆ.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರ ಅನುಸರಣೆಯನ್ನು ಬಿಟ್ಟು ತಿರುಗಿಕೊಂಡಿದ್ದೇವೆ, ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಒಬ್ಬರಿಗೊಬ್ಬರು ಪ್ರೀತಿ ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರ, ಇವರಾರಿಗೂ ಅನ್ಯಾಯ ಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ,


ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರವಿುಸಿಕೊಳ್ಳುತ್ತಾರೆ, ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ; ಮನೆಯನ್ನೂ ಮನೆಯವನನ್ನೂ ಸ್ವಾಸ್ತ್ಯವನ್ನೂ ಸ್ವಾಸ್ತ್ಯದವನನ್ನೂ ತುಳಿದುಬಿಡುತ್ತಾರೆ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಅದರ ಕರುಳುಗಳನ್ನೂ ಗರಿಗಳನ್ನೂ ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಬೀಸಾಡಬೇಕು.


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಅಷ್ಡೋದಿನ ಅರಮನೆಗಳಲ್ಲಿಯೂ ಐಗುಪ್ತದೇಶದ ಸೌಧಗಳಲ್ಲಿಯೂ ಹೀಗೆ ಪ್ರಕಟಿಸಿರಿ - ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ, ಪಟ್ಟಣದೊಳಗೆ ಎಷ್ಟೆಷ್ಟೋ ಗದ್ದಲಗಳೂ ಹಿಂಸೆಗಳೂ ನಡೆಯುತ್ತವೆ ನೋಡಿರಿ.


ಈ ವಿಪತ್ತುಗಳು ನಿನಗೆ ಸಂಭವಿಸುವದಕ್ಕೆ ನೀನು ಜನಾಂಗಗಳನ್ನು ಮೋಹಿಸಿ ಅವರ ಬೊಂಬೆಗಳಿಂದ ನಿನ್ನನ್ನು ಹೊಲಸು ಮಾಡಿಕೊಂಡದ್ದೇ ಕಾರಣ.


ಸಾಧಾರಣರು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ ವಿದೇಶಿಗಳನ್ನು ಅನ್ಯಾಯವಾಗಿ ಅರೆದು ಬಿಟ್ಟಿದ್ದಾರೆ.


ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ.


ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು