Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 1:15 - ಕನ್ನಡ ಸತ್ಯವೇದವು J.V. (BSI)

15 ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 1:15
28 ತಿಳಿವುಗಳ ಹೋಲಿಕೆ  

ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ - ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ; ಇಗೋ, ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ ಎಂದು ಅರಿಕೆಮಾಡಿದರು.


ಯೆಹೋವನು ನಿಮ್ಮ ಪಿತೃಗಳ ಮೇಲೆ ಬಹುಕೋಪಗೊಂಡಿದ್ದಾನೆ.


ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ.


ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!


ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ


ಯೆಹೋವನೇ, ಎದೋಮ್ಯರ ಹಾನಿಗಾಗಿ ಯೆರೂಸಲೇವಿುನ ನಾಶನದಿನವನ್ನು ನೆನಪುಮಾಡಿಕೋ. ಅವರು - ಅದನ್ನು ಹಾಳುಮಾಡಿರಿ, ಅಸ್ತಿವಾರಸಹಿತ ಹಾಳುಮಾಡಿರಿ ಎಂದು ಹೇಳಿದರಲ್ಲಾ.


ಲೋಕಭೋಗಿಗಳ ಹಾಸ್ಯದಿಂದಲೂ ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತುಹೋಯಿತು.


ಆಮೇಲೆ ಅವನು ನನಗೆ - ಆಹಾ, ಉತ್ತರದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ ಎಂದು ಕೂಗಿ ಹೇಳಿದನು.


ಅವರು ನನ್ನ ದಾರಿಯನ್ನು ಕಡಿದು ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ.


ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳೆಲ್ಲಾ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು, ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರು ಯೆಹೂದ್ಯರು ಉಭಯರು ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.


ನೀನು ಸಿಟ್ಟಿನಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ, ಕೋಪದಿಂದ ಜನಾಂಗಗಳನ್ನು ಒಕ್ಕುತ್ತೀ.


ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು