Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:3 - ಕನ್ನಡ ಸತ್ಯವೇದವು J.V. (BSI)

3 ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ, ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಹೇಳುವುದೇನೆಂದರೆ, “ನಾನು ಕುರುಬರ ಮೇಲೆ ಬಹಳವಾಗಿ ಕೋಪಿಸಿರುವೆನು. ಆ ನಾಯಕರನ್ನು ನಾನು ನನ್ನ ಜನರ ಮೇಲೆ ಜವಾಬ್ದಾರರನ್ನಾಗಿ ಮಾಡಿದ್ದೇನೆ.” ಯೆಹೂದದ ಜನರು ದೇವರ ಮಂದೆಯಾಗಿದ್ದಾರೆ. ಹೇಗೆ ಸಿಪಾಯಿಯು ತನ್ನ ಯುದ್ಧದ ಕುದುರೆಯನ್ನು ಪರಾಂಬರಿತ್ತಾನೋ ಹಾಗೆ ಸರ್ವಶಕ್ತನಾದ ಯೆಹೋವನು ತನ್ನ ಮಂದೆಯನ್ನು ನಿಜವಾಗಿಯೂ ಪರಾಂಬರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:3
28 ತಿಳಿವುಗಳ ಹೋಲಿಕೆ  

ನರಪುತ್ರನೇ, ಇಸ್ರಾಯೇಲೆಂಬ ಮಂದೆಯ ಕುರುಬರಿಗೆ ಈ ದೈವೋಕ್ತಿಯನ್ನು ನುಡಿ, ನುಡಿದೇ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಸ್ವಂತ ಹೊಟ್ಟೆಯನ್ನು ಹೊರೆದುಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳ ಹೊಟ್ಟೆಯನ್ನು ನೋಡುವದು ಕುರುಬರ ಧರ್ಮವಲ್ಲವೆ.


ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.


ಆ ಕರಾವಳಿಯು ಯೆಹೂದವಂಶಶೇಷದವರ ಪಾಲಾಗುವದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ.


ಯೆಹೋವನು ತನ್ನ ಜನರನ್ನು ಕಟಾಕ್ಷಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನೊವೊವಿುಯು ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ಸೊಸೆಯರೊಡನೆ ಹೊರಟಳು.


ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.


ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ ರಾಜವಂಶದವರನ್ನೂ ವಿದೇಶವಸ್ತ್ರಧಾರಿಗಳೆಲ್ಲರನ್ನೂ ದಂಡಿಸುವೆನು.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಎಪ್ಪತ್ತು ವರುಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ ಕಸ್ದೀಯರ ದೇಶವನ್ನೂ ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು;


ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.


ಪ್ರಿಯಳೇ, ನಿನ್ನನ್ನು ಫರೋಹನ ರಥಗಳ ಕುದುರೆಗೆ ಹೋಲಿಸಿದ್ದೇನೆ.


ಮಂದೆಯ ಕುರುಬನು ಸುತ್ತುಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಎಲ್ಲಾ ಸ್ಥಳಗಳಿಂದ ಅವುಗಳನ್ನು ಬಿಡಿಸಿ


ನಿಬಂಧನದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು; ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ತುತೂರಿಯೂದಿದಾಗೆಲ್ಲಾ ಆಹಾ ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು