ಜೆಕರ್ಯ 10:3 - ಕನ್ನಡ ಸತ್ಯವೇದವು J.V. (BSI)3 ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ, ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ಹೇಳುವುದೇನೆಂದರೆ, “ನಾನು ಕುರುಬರ ಮೇಲೆ ಬಹಳವಾಗಿ ಕೋಪಿಸಿರುವೆನು. ಆ ನಾಯಕರನ್ನು ನಾನು ನನ್ನ ಜನರ ಮೇಲೆ ಜವಾಬ್ದಾರರನ್ನಾಗಿ ಮಾಡಿದ್ದೇನೆ.” ಯೆಹೂದದ ಜನರು ದೇವರ ಮಂದೆಯಾಗಿದ್ದಾರೆ. ಹೇಗೆ ಸಿಪಾಯಿಯು ತನ್ನ ಯುದ್ಧದ ಕುದುರೆಯನ್ನು ಪರಾಂಬರಿತ್ತಾನೋ ಹಾಗೆ ಸರ್ವಶಕ್ತನಾದ ಯೆಹೋವನು ತನ್ನ ಮಂದೆಯನ್ನು ನಿಜವಾಗಿಯೂ ಪರಾಂಬರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |