Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:5 - ಕನ್ನಡ ಸತ್ಯವೇದವು J.V. (BSI)

5 ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:5
40 ತಿಳಿವುಗಳ ಹೋಲಿಕೆ  

ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ, ಅದರಲ್ಲಿ ಎಫ್ರಾಯೀಮನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.


ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಕಡೆಗಾಣಿಸಿದ್ದೇನೆ, ಕ್ರಿಸ್ತನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ;


ನಾವು ಉಪಯೋಗಿಸುವ ಆಯುಧಗಳು ಲೋಕಸಂಬಂಧವಾದ ಆಯುಧಗಳಲ್ಲ; ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ಉಪದೇಶಹೊಂದಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥನಾದನು.


ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.


ಆಗ ಆ ಶೋಧಕನು ಆತನ ಬಳಿಗೆ ಬಂದು - ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಎಂದು ಹೇಳಲು ಆತನು -


ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವದು; ಒಬ್ಬರ ಕೈಯನ್ನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.


ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ಧನುರ್ಧಾರಿಯು ನಿಲ್ಲನು, ಪಾದತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನನ್ನು ರಕ್ಷಿಸಿಕೊಳ್ಳನು;


ನೀನು ನಿನ್ನ ಸ್ಥಳವನ್ನು ಬಿಟ್ಟು ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹು ಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟ ಕಡೆಯಿಂದ ಬಂದು


ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಶೂರನೇ ಮಹಿಮಪ್ರಭಾವಗಳನ್ನು ಧರಿಸಿಕೊಂಡು ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.


ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ.


ಗಾಳಿಯಿಂದ ಬಡಿಸಿಕೊಂಡು ಹೋಗುವ ದೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.


ಭೂವಿುಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು; ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.


ಆಗ ಆತನಿಗೆ ಸಿಟ್ಟೇರಿದದರಿಂದ ಭೂವಿುಯು ಗಡಗಡನೆ ಕಂಪಿಸಿತು; ಆಕಾಶದ ಆಧಾರಗಳು ನಡುಗಿ ಕದಲಿದವು.


ಸೇವಕರಲ್ಲೊಬ್ಬನು ಅವನಿಗೆ - ಬೇತ್ಲೆಹೇವಿುನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲವನೂ ಪರಾಕ್ರಮಶಾಲಿಯೂ ರಣಶೂರನೂ ವಾಕ್ಚತುರನೂ ಸುಂದರನೂ ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆಂದು ತಿಳಿಸಿದನು.


ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.


ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿವಸವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಆಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವದನ್ನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ - ಬನ್ನಿರಿ, ದೇವರು ಮಾಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ,


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.


ನಾನು ಬಡಗಲಿಂದ ಒಬ್ಬನನ್ನು ಎಬ್ಬಿಸಿ ಕರತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿಂದ ಬಂದಿದ್ದಾನೆ; ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಮೇಲೆ ಬಿದ್ದು ಕುಂಬಾರನು ಜೇಡಿಯನ್ನು ತುಳಿಯುವ ಹಾಗೆ ತುಳಿಯುವನು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಅವನು ಅವರಿಗೆ - ಆಕೆಯನ್ನು ಕೆಳಗೆ ದೊಬ್ಬಿರಿ ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತವು ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸಪಡುತ್ತಾರೆ; ಆದರೆ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೆ ದೃಷ್ಟಿಯಿಡುವದಿಲ್ಲ, ಯೆಹೋವನನ್ನು ಆಶ್ರಯಿಸುವದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು