Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:5 - ಕನ್ನಡ ಸತ್ಯವೇದವು J.V. (BSI)

5 ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ನಿರ್ದೋಷಿಗಳೆನಿಸಿಕೊಳ್ಳುವರು; ಮಾರುವವರು - ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು; ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಆ ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವುಗಳನ್ನು ಕೊಂಡುಕೊಳ್ಳುವವರು, ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ. ಅವುಗಳನ್ನು ಮಾರುವವರು, ‘ನಾನು ಐಶ್ವರ್ಯವಂತನಾದೆನು, ಯೆಹೋವ ದೇವರಿಗೆ ಸ್ತೋತ್ರ,’ ಎಂದೆನ್ನುತ್ತಾರೆ. ಅವರ ಸ್ವಂತ ಕುರುಬರೂ ಅವುಗಳನ್ನು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:5
27 ತಿಳಿವುಗಳ ಹೋಲಿಕೆ  

ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


[ಟಗರುಹೋತಗಳೇ,] ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿ ಬಿಟ್ಟಿರಿ;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ.


ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರೀಹಟ್ಟಿಯೊಳಗೆ ಬಾಗಲಿಂದ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನು ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.


ನೀನು ನಿನ್ನ ವಿಷಯದಲ್ಲಿ - ನಾನು ಐಶ್ವರ್ಯವಂತನು, ಸಂಪನ್ನನು, ಒಂದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬಟ್ಟೆಯಿಲ್ಲದವನು ಆಗಿರುವದನ್ನು ತಿಳಿಯದೆ ಇದ್ದೀ.


ನೀನು ಐಗುಪ್ತದೇಶದಲ್ಲಿದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.


ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಇಸ್ರಾಯೇಲ್ಯರು ನ್ಯಾಯವಂತನನ್ನು ಬೆಳ್ಳಿಗೆ ಮಾರುತ್ತಾರೆ, ಒಂದು ಜೊತೆಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ವಿಕ್ರಯಿಸುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು