Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:8 - ಕನ್ನಡ ಸತ್ಯವೇದವು J.V. (BSI)

8 ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:8
53 ತಿಳಿವುಗಳ ಹೋಲಿಕೆ  

ಯಾರೂ ಹಾದುಹೋಗಿ ಬಾರದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ಬೀಳನು; ಏಕಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.


ಜನಾಂಗಗಳವರು ನೋಡಿ ತಮ್ಮ ಮಹಾಶಕ್ತಿಗೂ ನಾಚಿಕೆಪಡುವರು; ಬಾಯ ಮೇಲೆ ಕೈಯಿಟ್ಟುಕೊಳ್ಳುವರು, ಅವರ ಕಿವಿ ಕೇಳದಿರುವದು.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ನಿಮ್ಮ ಗುಳಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿಯೂ ಕುಡುಗೋಲುಗಳನ್ನು ಬರ್ಜಿಗಳನ್ನಾಗಿಯೂ ಮಾಡಿರಿ; ದುರ್ಬಲನೂ ಶೂರನೆಂದುಕೊಳ್ಳಲಿ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ನಾನೇ ಆದಿಯೂ ಅಂತವೂ ಮೊದಲನೆಯವನೂ ಕಡೆಯವನೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ.


ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಯಾಕೋಬನು ಗರ್ಭದಲ್ಲಿ ಅಣ್ಣನನ್ನು ವಂಚಿಸಿದನು; ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ನೀವು ದೇವರುಗಳು, ಎಲ್ಲರೂ ಪರಾತ್ಪರನ ಮಕ್ಕಳು ಎಂದು ನಾನು ಹೇಳಿದೆನು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.


ನಿಮ್ಮಲ್ಲಿ ಐದು ಮಂದಿಯು ನೂರು ಮಂದಿಯನ್ನೂ ನೂರು ಮಂದಿಯು ಹತ್ತುಸಾವಿರ ಮಂದಿಯನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವದಕ್ಕೆ ಶಕ್ತನಾದನು.


ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ.


ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.


ಯೆಹೋವನು ಸ್ವಜನರಿಗಾಗಿ ಅವರ ಮೇಲ್ಗಡೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವದು; ಕರ್ತನಾದ ಯೆಹೋವನು ತುತೂರಿಯನ್ನೂದಿ ದಕ್ಷಿಣಪ್ರಾಂತದ ಬಿರುಗಾಳಿಗಳೊಡನೆ ನುಗ್ಗುವನು.


ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.


ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು