Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:8 - ಕನ್ನಡ ಸತ್ಯವೇದವು J.V. (BSI)

8 ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇಶದ ಮೂರನೇ ಎರಡು ಪಾಲಷ್ಟು ಜನರು ಗಾಯಗೊಂಡು ಸಾಯುವರು. ಒಂದು ಪಾಲಷ್ಟು ಜನರು ಬದುಕಿ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:8
34 ತಿಳಿವುಗಳ ಹೋಲಿಕೆ  

ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.


ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು