Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:10 - ಕನ್ನಡ ಸತ್ಯವೇದವು J.V. (BSI)

10 ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:10
28 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.


ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಭತ್ತು ಪಟ್ಟಣಗಳೂ ಅವುಗಳಿಗೆ ಸೇರಿದ ಗ್ರಾಮಗಳೂ;


ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಕೊಡುತ್ತಿದ್ದು ಪ್ರವಾದಿಯಾದ ಆ ಯೆರೆಮೀಯನನ್ನು ಹಿಡಿದು ನೀನು ಕಸ್ದೀಯರನ್ನು ಮರೆಹೊಗಲು ಹೋಗುತ್ತಿದ್ದೀ ಎಂದು ಹೇಳಿದನು.


ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.


ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ವಿುಚ್ಬೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು.


ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ಕೇಳಿದಾಗ


ಆಗ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.


ಇದಲ್ಲದೆ ಅವರು ಅರಣ್ಯದಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲುತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದು ಹಾಕಿದರು. ಅಲ್ಲಿಂದ ಗಿದೋವಿುನವರೆಗೆ ಹಿಂದಟ್ಟಿ ತಿರಿಗಿ ಎರಡು ಸಾವಿರ ಜನರನ್ನು ಹತಮಾಡಿದರು.


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ [ಅನ್ನುತ್ತಾರೆ], ರಾಮಾ ನಡುಗುತ್ತದೆ,


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಅಲ್ಲಿಂದ ಎಫ್ರಾಯೀಮ್ ಬಾಗಲು, ಯೆಷಾನಾ ಬಾಗಲು, ಮೀನು ಬಾಗಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಲಿನವರೆಗೂ ಹೋಗಿ ಸೆರೆಮನೆಯ ಬಾಗಲಿನ ಬಳಿಯಲ್ಲಿ ನಿಂತೆವು.


ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡು ಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಬಿಟ್ಟನು.


ವಿುಕ್ಕ ಲೇವಿಯರಾದ ಮೆರಾರೀಯರಿಗೆ ಜೆಬುಲೂನ್‍ಕುಲದ ಸ್ವಾಸ್ತ್ಯದಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ


ಏಟಾಮ್, ಅಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳೂ


ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನವಾಕ್ಯವನ್ನು ಪ್ರಕಟಿಸಲು ಅವರು ತಿರಿಗಿ ಬಂದರು.


ಬೆನ್ಯಾಮೀನ್ ಕುಲದಿಂದ ಗಿಬ್ಯೋನ್, ಗೆಬ,


ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡುಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.


ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಅವನು ಯೆರೂಸಲೇವಿುನಲ್ಲಿ ಮೂಲೆಬಾಗಲು, ತಗ್ಗಿನ ಬಾಗಲು, ಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು.


ಯೆಹೋವನು ಇಂತೆನ್ನುತ್ತಾನೆ - ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇವಿುನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮು ಸುವ್ರತನಗರಿ ಅನ್ನಿಸಿಕೊಳ್ಳುವದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು