Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:21 - ಕನ್ನಡ ಸತ್ಯವೇದವು J.V. (BSI)

21 ಅಲ್ಲದೆ ಯೆರೂಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಆ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡೆಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:21
27 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಅದರಲ್ಲಿ ಹೊಲೆಯಾದದ್ದೊಂದೂ ಸೇರುವದಿಲ್ಲ, ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಸೇರುವದಿಲ್ಲ; ಯಜ್ಞದ ಕುರಿಯಾದಾತನ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದವೆಯೋ ಅವರು ಮಾತ್ರ ಸೇರುವರು.


ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ನೀವು ಭೋಜನ ಮಾಡುವಾಗಲೂ ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವಾಗಿಯೇ ಇರುವವಲ್ಲವೆ.


ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ನೀವು ದೇಶವನ್ನು ಸ್ವಾಸ್ತ್ಯಸ್ವಾಸ್ತ್ಯವಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು; ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ; ಆ ಪ್ರಾಂತವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


ಒರಳ ಕೇರಿಯವರೇ, ಕಿರಚಿರಿ, ಎಲ್ಲಾ ಸಾಹುಕಾರರು ಹಾಳಾದರು, ಹೊರೆಬೆಳ್ಳಿಯವರೆಲ್ಲರು ನಾಶವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು