Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:6 - ಕನ್ನಡ ಸತ್ಯವೇದವು J.V. (BSI)

6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಉಡುಗಿಹೋಗುವವು, ಇಂಥಾ ದಿನವು ಒಂದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6-7 ಅದು ಒಂದು ಮಹಾ ವಿಶೇಷ ದಿವಸವಾಗಿರುವದು. ಆ ದಿವಸದಲ್ಲಿ ಬೆಳಕಾಗಲಿ ಚಳಿಯಾಗಲಿ ಹಿಮವಾಗಲಿ ಇರುವದಿಲ್ಲ. ಇದು ಹೇಗೆ ಎಂದು ಯೆಹೋವನಿಗೆ ಮಾತ್ರ ಗೊತ್ತು. ರಾತ್ರಿ ಬರಬೇಕಾದ ವೇಳೆಯಲ್ಲಿ ಹಗಲು ಇನ್ನೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:6
24 ತಿಳಿವುಗಳ ಹೋಲಿಕೆ  

ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.


ನನ್ನನ್ನು ನಂಬುವ ಒಬ್ಬನಾದರೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಬೆಳಕಿನ ರಾಜ್ಯದೊಳಗೆ ದೇವಜನರ ಬಾಧ್ಯತೆಯಲ್ಲಿ ಪಾಲುಗಾರರಾಗುವದಕ್ಕೆ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇವೆ.


ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಕತ್ತಲು ಅದನ್ನು ಮುಸುಕಲಿಲ್ಲ.


ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].


ನಾನು [ದಿವ್ಯಜ್ಞಾನದಿಂದ] ನೋಡಿದೆನು, ಹಾ, ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಆಕಾಶದ ತಾರೆಗಳೂ ನಕ್ಷತ್ರರಾಶಿಗಳೂ ಬೆಳಗವು, ಸೂರ್ಯನು ಮೂಡುತ್ತಲೇ ಕತ್ತಲಾಗುವನು, ಚಂದ್ರನು ಪ್ರಕಾಶಿಸನು.


ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿ. ಅದೇನಂದರೆ -


ಕರ್ತನ ಆಗಮನದ ಗಂಭೀರವಾದ ಮಹಾದಿನವು ಬರುವದಕ್ಕೆ ಮುಂಚೆ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂವಿುಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ, ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು;


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


[ಫರೋಹನೇ,] ನಾನು ನಿನ್ನ ಬೆಳಕನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಮಂಕುಮಾಡಿ ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ನಿನ್ನ ಮೇಲೆ ಆಕಾಶದಲ್ಲಿ ವಿುನುಗುವ ಸಕಲಜ್ಯೋತಿಗಳನ್ನೂ ನಾನು ಮಸಕುಮಾಡಿ ನಿನ್ನ ದೇಶದಲ್ಲಿ ಕತ್ತಲನ್ನೊಡ್ಡುವೆನು; ಇದು ಕರ್ತನಾದ ಯೆಹೋವನ ನುಡಿ.


ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು;


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು