Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:8 - ಕನ್ನಡ ಸತ್ಯವೇದವು J.V. (BSI)

8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ಆ ನದಿಯು ಇಬ್ಭಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ಈ ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:8
18 ತಿಳಿವುಗಳ ಹೋಲಿಕೆ  

ನನ್ನನ್ನು ನಂಬಿದವನ ಹೊಟ್ಟೆಯೊಳಗಿಂದ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಜೀವಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು.


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಉದ್ಯಾನಗಳಿಗೆ ಹಾಯುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಪ್ರವಾಹ, ಇವೆಲ್ಲವೂ ನಿನ್ನಲ್ಲಿವೆ.


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಯೆರೂಸಲೇವಿುಗೆ ಮೂಡಲಲ್ಲಿ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು ಆ ಗುಡ್ಡವು ಮೂಡಲಿಂದ ಪಡುವಲಿಗೆ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವದು; ಗುಡ್ಡದ ಅರ್ಧಭಾಗವು ಬಡಗಲಿಗೆ, ಅರ್ಧಭಾಗವು ತೆಂಕಲಿಗೆ ಸರಿದುಕೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು