Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:4 - ಕನ್ನಡ ಸತ್ಯವೇದವು J.V. (BSI)

4 ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:4
34 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನಾನು ಅವರ ದುಷ್ಕೃತ್ಯಗಳ ವಿಷಯವಾಗಿ ಕ್ಷಮೆಯುಳ್ಳವನಾಗಿರುವೆನು, ಅವರ ಪಾಪಗಳನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯುತ್ತಾನೆ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.


ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.


ಹೀಗೆ ಮನೆತುಂಬ ಊಟಕ್ಕೆ ಕೂತರು. ಆಮೇಲೆ ಅರಸನು ಕೂತವರನ್ನು ನೋಡುವದಕ್ಕೆ ಒಳಕ್ಕೆ ಬರಲಾಗಿ ಮದುವೇಬಟ್ಟೆಯನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು


ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಣ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ; ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯಜನರ ಪ್ರಾಕಾರಕ್ಕೆ ಬರುವರು.


ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಙ್ತಿಯಲ್ಲಿ ಊಟಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು