Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:4 - ಕನ್ನಡ ಸತ್ಯವೇದವು J.V. (BSI)

4 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:4
19 ತಿಳಿವುಗಳ ಹೋಲಿಕೆ  

ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವನಿಗೆ ಸಂಬಂಧಿಗಳಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವದು.


ಅದು ಕೇವಲ ಯೆಹೋವನದಾಗುವದಕ್ಕೆ ನಾಶವಾಗತಕ್ಕದ್ದಾಗಿರುವದರಿಂದ ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟದಿರಬೇಕು.


ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದುಬಿಡುವದು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ಆಗ ಅವನು ನನಗೆ - ಇದು ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪ; ಇದಕ್ಕೆ ತಕ್ಕಂತೆ ಪ್ರತಿಯೊಬ್ಬ ಕಳ್ಳನು ದೇಶದಿಂದ ತೊಡೆಯಲ್ಪಡುವನು; ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳುಸಾಕ್ಷಿಯೂ ದೇಶದಿಂದ ತೊಡೆಯಲ್ಪಡುವನು.


ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳುಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.


ನಿಮಗೆ ಊರಲ್ಲಿಯೂ ಅಡವಿಯಲ್ಲಿಯೂ ಅಶುಭವುಂಟಾಗುವದು.


ನಾವು ಇಟ್ಟ ಆಣೆಯ ನಿವಿುತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ಆದರೆ ಒಂದನ್ನು ಮಾಡೋಣ.


ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.


ನಿನ್ನ ಹಗೆಗಳನ್ನು ಅವಮಾನವು ಮುಸುಕುವದು; ದುಷ್ಟರ ನಿವಾಸವು ನಿರ್ಮೂಲವಾಗುವದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು