Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:12 - ಕನ್ನಡ ಸತ್ಯವೇದವು J.V. (BSI)

12 ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:12
34 ತಿಳಿವುಗಳ ಹೋಲಿಕೆ  

ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ಯಾಕಂದರೆ ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದೇ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ನೀವೋ ನನ್ನ ಸುಶಿಕ್ಷಣವನ್ನು ಹಗೆ ಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ಅವರು ಕಣ್ಣಿದ್ದು ನೋಡಿದರೂ ಕಾಣಬಾರದು, ಕಿವಿಯಿದ್ದು ಕೇಳಿದರೂ ತಿಳುಕೊಳ್ಳಬಾರದು, ಹಾಗೆ ಕಂಡು ತಿಳುಕೊಂಡರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದಾರು ಎಂದೇ ಮರೆಮಾಡಲಾಗಿದೆ.


ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿ.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ ನೆಮ್ಮದಿಯಾಗಿಯೂ ಇದ್ದು ದಕ್ಷಿಣಪ್ರಾಂತದಲ್ಲಿಯೂ ಇಳಕಲಿನ ಪ್ರದೇಶದಲ್ಲಿಯೂ ಪ್ರಜೆಯು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಬಾರದೋ?


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ; ಅವರ ಹೃದಯದ ಹಲಗೆಯಲ್ಲಿಯೂ ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ಯೆಹೋವನು ಮೊದಲು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು; ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕೂ ಉಪದೇಶ ಹೊಂದಲಿಕ್ಕೂ ಒಪ್ಪಲಿಲ್ಲ.


ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ಯೆಹೋವನು ನಿಮ್ಮ ಪಿತೃಗಳ ಮೇಲೆ ಬಹುಕೋಪಗೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು