Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:2 - ಕನ್ನಡ ಸತ್ಯವೇದವು J.V. (BSI)

2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ ರೆಗೆಮ್ ಮೆಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು ರೆಗೆಮ್ ಮೆಲೆಕ್‍ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬೇತೇಲಿನ ಜನರು ಸರೆಚರ್, ರೆಗೆಮ್ ಮೆಲೆಕ್ ಮತ್ತು ಅವರ ಜನರನ್ನು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಲು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:2
11 ತಿಳಿವುಗಳ ಹೋಲಿಕೆ  

ಒಂದು ಊರಿನವರು ಇನ್ನೊಂದೂರಿಗೆ ಹೋಗಿ - ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ ಎಂದು ಹೇಳುವರು.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ನಾನು ಯೆಹೋವನಿಗೆ ಶಾಂತ್ಯರ್ಪಣೆಯನ್ನು ಸಲ್ಲಿಸುವದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಮುಂಗೊಂಡೆನು ಅಂದನು.


ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ, ಯೆದಾಯ ಎಂಬವರ ಕೈಯಿಂದ ಬೆಳ್ಳಿಬಂಗಾರಗಳನ್ನು ಈಸಿಕೋ; ಈ ದಿವಸವೇ ನೀನು ಹೋಗಿ ಬಾಬೆಲಿನಿಂದ ಬಂದ ಇವರು ಇಳಿದಿರುವ ಚೆಫನ್ಯನ ಮಗನಾದ ಯೋಷೀಯನ ಮನೆಯನ್ನು ಸೇರಿ


ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸಿ ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ನನ್ನ ಸುಂದರಾಲಯವನ್ನು ಚಂದಗೊಳಿಸುವೆನು.


ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು - ಯೆಹೋವನೇ, ನೀನು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ಐಗುಪ್ತದೇಶದಿಂದ ಬಿಡಿಸಿದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವದೇಕೆ?


ಬೇತೇಲ್ ಆಯಿ ಎಂಬ ಊರುಗಳವರು 223


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು