Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:4 - ಕನ್ನಡ ಸತ್ಯವೇದವು J.V. (BSI)

4 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಯೆರೂಸಲೇವಿುನ ಚೌಕಗಳಲ್ಲಿ ಮುದುಕ ಮುದುಕಿಯರು ಕೂಡ್ರುವರು; ಅತಿವೃದ್ಧಾಪ್ಯದ ನಿವಿುತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ವೃದ್ಧವೃದ್ಧೆಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ಕಾಣಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ವೃದ್ಧರೂ, ಮುದುಕಿಯರೂ ವಾಸವಾಗಿರುವರು. ವೃದ್ದಾಪ್ಯದಿಂದ ಒಬ್ಬೊಬ್ಬರ ಕೈಯಲ್ಲಿ ಅವರವರ ಕೋಲು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:4
12 ತಿಳಿವುಗಳ ಹೋಲಿಕೆ  

ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಗತಿಸಿದನು.


ಸುಗ್ಗೀಕಾಲದಲ್ಲಿ ತೆನೆಸಿವುಡು [ಮನೆಗೆ] ಸೇರುವಂತೆ ನೀನು ವೃದ್ಧಾಪ್ಯದಲ್ಲಿ ಸಮಾಧಿಗೆ ಸೇರುವಿ.


ನಾನು ನಿನ್ನ ಮತ್ತು ನಿನ್ನ ಮನೆಯವರ ಬಾಹುಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದಿಲ್ಲ.


ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವದನ್ನು ನೋಡುವಿ. ಇಸ್ರಾಯೇಲ್ಯರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದೇ ಇಲ್ಲ.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರೂ ವೃದ್ಧರೂ ಜೊತೆಯಾಗಿ ಹರ್ಷಿಸುವರು; ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನುಂಟುಮಾಡಿ ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.


ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು.


ಆದರೂ ಆ ಮನುಷ್ಯನು ಕೆಲಸಮಾಡಲಾರದೆಹೋದ ಕಾಲಕ್ಕೆ ಅವನು ತಕ್ಕಷ್ಟು ಹಣಕೊಟ್ಟು ಅವನನ್ನು ಪೂರ್ಣವಾಗಿ ಸ್ವಸ್ಥಪಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು