Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ, ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ, ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಂದ ಬಂದ ಸಂದೇಶ: ಹದ್ರಾಕ್ ದೇಶದ ಮತ್ತು ಅದರ ರಾಜಧಾನಿಯಾದ ದಮಸ್ಕ ನಗರದ ವಿರುದ್ಧವಾಗಿ ಯೆಹೋವನ ಸಂದೇಶ: “ಇಸ್ರೇಲ್ ಕುಲದವರು ಮಾತ್ರವೇ ದೇವರನ್ನು ತಿಳಿದವರಲ್ಲ. ಪ್ರತಿಯೊಬ್ಬರೂ ಸಹಾಯಕ್ಕಾಗಿ ಆತನಿಗೆ ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:1
22 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲನ್ನು ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.


ಯೆಹೋವನು ಇಂತೆನ್ನುತ್ತಾನೆ - ಸಿಂಹದ ಬಾಯೊಳಗಿಂದ ಎರಡು ಕಾಲುಗಳಾಗಲಿ ಕಿವಿಯ ತುಂಡಾಗಲಿ ಹೇಗೆ ಕುರುಬನಿಂದ ರಕ್ಷಿಸಲ್ಪಡುವದೋ ಹಾಗೆಯೇ ಸಮಾರ್ಯದೊಳಗೆ ಗದ್ದುಗೆಯ ಮೂಲೆಯಲ್ಲಿಯೂ ಮಂಚದ ಪಟ್ಟೇದಿಂಬುಗಳಲ್ಲಿಯೂ ಒರಗಿಕೊಳ್ಳುವ ಇಸ್ರಾಯೇಲ್ಯರ [ಸ್ವಲ್ಪಭಾಗ ಮಾತ್ರ] ರಕ್ಷಿಸಲ್ಪಡುವದು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


[ಯೆಹೋವನೇ,] ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ; ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತೀ.


ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಆಗ ಅವನು ರಾತ್ರಿ ವೇಳೆಯಲ್ಲಿ ತನ್ನ ದಂಡನ್ನು ಎರಡು ಭಾಗ ಮಾಡಿ ತನ್ನ ಭಟರೊಡನೆ ಅವರ ಮೇಲೆ ಬಿದ್ದು ಹೊಡೆದು ದಮಸ್ಕಪಟ್ಟಣದ ಉತ್ತರ ಕಡೆಯಲ್ಲಿರುವ ಹೋಬಾ ಊರಿನ ತನಕ ಹಿಂದಟ್ಟಿದನು.


ಯೆಹೋವನು ಇಂತೆನ್ನುತ್ತಾನೆ - ತೂರ್ ಪಟ್ಟಣವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಜನರನ್ನು ಗುಂಪುಗುಂಪಾಗಿ ಎದೋವಿುಗೆ ವಶಮಾಡಿಬಿಟ್ಟಿತಷ್ಟೆ;


ನಿನೆವೆಯ ವಿಷಯವಾದ ದೈವೋಕ್ತಿ. ಎಲ್ಕೋಷ್ ಊರಿನ ನಹೂಮನಿಗೆ ಆದ ದೈವದರ್ಶನದ ಗ್ರಂಥ.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;


ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು