Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:15 - ಕನ್ನಡ ಸತ್ಯವೇದವು J.V. (BSI)

15 ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:15
25 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.


ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು.


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ಇವರು ವೀರರಾಗಿ ರಣದೊಳಗೆ [ಶತ್ರುಗಳನ್ನು] ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ತಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.


ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು; ಅವು ಯಜ್ಞವೇದಿಗೆ ಏಕವಾಗಿರಬೇಕು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.


ಆವರೆಗೆ ನಿದ್ರಿಸುವವನಂತೆಯೂ ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚತ್ತು


ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.


ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಎಲೈ, ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ! ಬಂದು ದ್ರಾಕ್ಷಾರಸವನ್ನೂ ಹಾಲನ್ನೂ ಹಣಕೊಡದೆ ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.


ನಿನ್ನ ಮುದ್ದುಗಳು ಉತ್ತಮದ್ರಾಕ್ಷಾರಸದ ಹಾಗಿರಲಿ; ನಿದ್ರಿಸುವವರ ತುಟಿಗಳಲ್ಲಿ ಸರಾಗವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವದು.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ನನ್ನನ್ನು ತುಸು ಎಳೆ; ನಿನ್ನ ಹಿಂದೆ ಓಡಿ ಬರುವೆವು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ದ್ರಾಕ್ಷಾರಸಕ್ಕಿಂತಲೂ ನಿನ್ನ ಲಾಲನೆಯನ್ನು ಹೆಚ್ಚಾಗಿ ಕೊಂಡಾಡುವೆವು; ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ಆಗ ದಾವೀದನು ಅವನಿಗೆ - ನೀನು ಈಟಿ ಕತ್ತಿ ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ; ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬರುತ್ತೇನೆ.


ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ ಹೋರಿಯ ವಿುಕ್ಕ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಅಂಬು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.


ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು