Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:4 - ಕನ್ನಡ ಸತ್ಯವೇದವು J.V. (BSI)

4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರವಿುಸಿ ಪೌಳಿಗೋಡೆಯನ್ನು ಸಮುದ್ರದೊಳಕ್ಕೆ ಹೊಡೆದು ಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:4
14 ತಿಳಿವುಗಳ ಹೋಲಿಕೆ  

ನಿನ್ನ ಅಪಾರವಾದ ಅಪರಾಧಗಳಿಂದಲೂ ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದಿ; ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿಮಾಡಿಬಿಟ್ಟೆನು;


ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು!


ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು; ಅದು ಅದರ ಅರಮನೆಗಳನ್ನು ನುಂಗಿಬಿಡುವದು.


ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಯೆಹೂದ್ಯರಿಗೆ ಮಾರುವೆನು; ಅವರು ಅವರನ್ನು ದೂರದ ಜನಾಂಗವಾದ ಶೆಬದವರಿಗೆ ಮಾರಿಬಿಡುವರು; ಯೆಹೋವನೇ ಇದನ್ನು ನುಡಿದಿದ್ದಾನೆ.


ನಿನ್ನ ವಿುತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಹೊಲಸನ್ನಾಗಿ ತಳ್ಳಿಬಿಟ್ಟೆನು; ಹೌದು. ನೆರಳುಕೊಡುವ ಕೆರೂಬಿಯೇ, ಕೆಂಡದ ಮಳೆಯ ಮಧ್ಯದಲ್ಲಿನ ನಿನ್ನ ನೆಲೆಯಿಂದ ನಾನು ನಿನ್ನನ್ನು ಕಿತ್ತು ಧ್ವಂಸಮಾಡಿದೆನು.


ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯದಲ್ಲಿ ನಿನಗೆ ಹತರಾದವರ ಗತಿ ಸಂಭವಿಸುವದು.


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ದುರ್ದ್ರವ್ಯವು ವ್ಯರ್ಥ; ಧರ್ಮವು ಮೃತ್ಯುವಿನಿಂದ ರಕ್ಷಕ.


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಅಪ್ಪಣೆಕೊಟ್ಟಿದ್ದಾನೆ;


ಅಷ್ಕೆಲೋನು ಇದನ್ನು ನೋಡಿ ಹೆದರುವದು; ಗಾಜವು ಸಹ ಅತಿಸಂಕಟಪಡುವದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು