Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:6 - ಕನ್ನಡ ಸತ್ಯವೇದವು J.V. (BSI)

6 ಅಷ್ಡೋದಿನಲ್ಲಿ ವಿುಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು. ಸರ್ವೇಶ್ವರ ಇಂತೆನ್ನುತ್ತಾರೆ: “ಫಿಲಿಷ್ಟಿಯದ ಗರ್ವವನ್ನು ಅಡಗಿಸುವೆನು. ಅವರು ಸವಿಯುವ ರಕ್ತಸಿಕ್ತ ಮಾಂಸವನ್ನು ಅವರ ಬಾಯಿಂದ ಕಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಷ್ಡೋದಿನ ಜನರಿಗೆ ತಮ್ಮ ತಂದೆ ಯಾರು ಎಂದು ತಿಳಿಯರು. ನಾನು ಅಹಂಕಾರದ ಪಿಲಿಷ್ಟಿಯ ಜನರನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಿಸುವರು. ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:6
13 ತಿಳಿವುಗಳ ಹೋಲಿಕೆ  

ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಆ ಪ್ರಾಂತಗಳವರು ಸೇನಾಧೀಶ್ವರ ಯೆಹೋವನ ಜನರನ್ನು ದೂಷಿಸಿ ಅವರ ಮೇಲೆ ಉಬ್ಬಿಕೊಂಡು ಬಂದದರಿಂದ ಅವರ ಹೆಮ್ಮೆಯ ನಿವಿುತ್ತವೇ ಅವರಿಗೆ ಈ ಗತಿಯಾಗುವದು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತುಹೋದವರ ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವಿನ ಪಾಡೇ!


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.


ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.


ಗಾಜ ನಿರ್ಜನವಾಗುವದು, ಅಷ್ಕೆಲೋನ್ ಹಾಳಾಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಓಡಿಸಿಬಿಡುವರು, ಎಕ್ರೋನ್ ನಿರ್ಮೂಲವಾಗುವದು.


ಅಷ್ಕೆಲೋನು ಇದನ್ನು ನೋಡಿ ಹೆದರುವದು; ಗಾಜವು ಸಹ ಅತಿಸಂಕಟಪಡುವದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವದು;


ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು