Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:8 - ಕನ್ನಡ ಸತ್ಯವೇದವು J.V. (BSI)

8 ಯಾರೂ ಹಾದುಹೋಗಿ ಬಾರದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ಬೀಳನು; ಏಕಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:8
39 ತಿಳಿವುಗಳ ಹೋಲಿಕೆ  

ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.


ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು; ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನೂ ಕಿತ್ತುಹಾಕರು; ಇದು ನಿನ್ನ ದೇವರಾದ ಯೆಹೋವನ ನುಡಿ.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.


ಹೆಣ್ಣುಹಕ್ಕಿಗಳು ಹಾರಿಯಾಡುತ್ತಾ [ಮರಿಗಳನ್ನು] ಕಾಪಾಡುವಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು, ಹಾದು ಹೋಗುತ್ತಾ ಅಪಾಯದಿಂದ ತಪ್ಪಿಸುವನು.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.


ಈಗ ಕೇಳು, ಇಸ್ರಾಯೇಲ್ಯರ ಕೂಗು ನನಗೆ ಮುಟ್ಟಿತು; ಐಗುಪ್ತ್ಯರು ಅವರಿಗೆ ಕೊಡುವ ಉಪದ್ರವವನ್ನು ನಾನು ನೋಡಿದ್ದೇನೆ.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ದಂಡಿಗೂ ನಮ್ಮ ಪ್ರಿಯ ಪಟ್ಟಣಕ್ಕೂ ಮುತ್ತಿಗೆಹಾಕಿದರು. ಆಗ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಟ್ಟಿತು.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ, ಎಂದು ಹೇಳಿದನು.


ಅದರಲ್ಲಿ ಜನರು [ತುಂಬಾ] ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮು ನೆಮ್ಮದಿಯಾಗಿ ನೆಲೆಗೊಂಡಿರುವದು.


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೊಡೆಯುವನು ಎಂಬದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದ ವಾಕ್ಯವು.


ಐಗುಪ್ತವನ್ನು ಕುರಿತದ್ದು. ಐಗುಪ್ತದ ಅರಸನಾದ ಫರೋಹನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ.


ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಗೀತವನ್ನು ಹಾಡುವರು - ನಮಗೆ ಬಲವಾದ ಪಟ್ಟಣವಿದೆ. [ಯೆಹೋವನು ತನ್ನ] ರಕ್ಷಣೆಯನ್ನು ಕೋಟೆಯನ್ನಾಗಿಯೂ ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಚೀಯೋನ್ ಪರ್ವತದ ಸಂಪೂರ್ಣ ಮಂದಿರದ ಮೇಲೆಯೂ ಅಲ್ಲಿನ ಕೂಟಗಳ ಮೇಲೆಯೂ ಹಗಲಲ್ಲಿ ಧೂಮಮೇಘವನ್ನು, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನು, ಉಂಟು ಮಾಡುವನು. [ಈ] ಪ್ರಭಾವದ ಮೇಲೆಲ್ಲಾ ಆವರಣವಿರುವದು.


ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.


ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.


ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.


ಫಕ್ಕನೆ ಬರುವ ಅಪಾಯಕ್ಕಾಗಲಿ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವದೇ ಇಲ್ಲ.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳಿಗೆ ತಬ್ಬಿಬ್ಬನ್ನು ಉಂಟುಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು