Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:32 - ಕನ್ನಡ ಸತ್ಯವೇದವು J.V. (BSI)

32 ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:32
23 ತಿಳಿವುಗಳ ಹೋಲಿಕೆ  

ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ತಂದೆಯಿಂದ ಶಿಕ್ಷೆಹೊಂದದ ಮಗನೆಲ್ಲಿ? ಮಕ್ಕಳೆಲ್ಲರೂ ಹೊಂದುವ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.


ಅವರ ಊಟವೇ ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.


ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.


ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವದಕ್ಕೆ ಎಷ್ಟು ಕಾಲ ಇಷ್ಟಪಡುವರು? ಜ್ಞಾನಹೀನರು ತಿಳುವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.


ನಿಮ್ಮ ಪುಟ್ಟಿಗಳಿಗೂ ಕೊಣವಿಗೆಗಳಿಗೂ ಅಶುಭವುಂಟಾಗುವದು.


ಅವಳ ಮನೆಯೇ ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.


ಆ ಮನೆಯು ಪ್ರೇತನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.


ಶಿಷ್ಟರ ಭಾಷಣ ಬಹುಜನಪೋಷಣ; ಬುದ್ಧಿಯ ಕೊರತೆ ಮೂರ್ಖರ ನಾಶನ.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು; ಜ್ಞಾನಹೀನನು ಸೊಕ್ಕೇರಿ ಭಯವನ್ನು ಲಕ್ಷಿಸನು.


ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು