Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:4 - ಕನ್ನಡ ಸತ್ಯವೇದವು J.V. (BSI)

4 ಇವು ಮೂಢರಿಗೆ ಜಾಣತನವನ್ನೂ ಯೌವನಸ್ಥರಿಗೆ ತಿಳುವಳಿಕೆಯನ್ನೂ ಬುದ್ಧಿಯನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:4
19 ತಿಳಿವುಗಳ ಹೋಲಿಕೆ  

ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ.


ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳುವಳಿಕೆಯನ್ನು ಹೊಂದಿದ್ದೇನೆ.


ನಿನ್ನ ವಾಕ್ಯವಿವರಣೆಯಿಂದ ಯುಕ್ತಿಹೀನರಿಗೆ ಜ್ಞಾನೋದಯವಾಗುವದು.


ಹಾಗೆಯೇ ಎಲ್ಲಾ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಯೌವನಸ್ಥರನ್ನು ಎಚ್ಚರಿಸು.


ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು.


ಅಲ್ಲಿ ರಾಜಮಾರ್ಗವಿರುವದು, ಹೌದು [ಹೋಗಿಬರುವ] ದಾರಿ; ಅದು ಪರಿಶುದ್ಧಮಾರ್ಗ ಎನಿಸಿಕೊಳ್ಳುವದು; ಯಾವ ಅಶುದ್ಧನೂ ಅಲ್ಲಿ ನಡೆಯನು, ಅದು ದೇವಜನರಿಗಾಗಿಯೇ ಇರುವದು, ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಮಗನೇ, ಸುಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆ ನಂಬಿಕೆಗೆ ಯೋಗ್ಯವಾದದ್ದು; ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಯೆಹೋವನು ಸಾಧುಜನರನ್ನು ಕಾಪಾಡುವವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು