Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:15 - ಕನ್ನಡ ಸತ್ಯವೇದವು J.V. (BSI)

15 ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ; ಬಡವನಿಗೆ ಬಡತನವು ಅಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಐಶ್ವರ್ಯವು ಸಾಹುಕಾರನನ್ನು ಕಾಪಾಡುತ್ತದೆ. ಬಡತನವಾದರೋ ಬಡವನನ್ನು ನಾಶಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:15
13 ತಿಳಿವುಗಳ ಹೋಲಿಕೆ  

ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದೂ ಎತ್ತರವಾದ ಗೋಡೆಯೆಂದೂ ಭಾವಿಸಿಕೊಳ್ಳುತ್ತಾನೆ.


ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು; ಹೌದು, ವಿುತ್ರರೂ ಅವನಿಗೆ ದೂರವಾಗುವರು. [ಅವರ] ಬರೀ ಮಾತುಗಳನ್ನು [ನಂಬಿ] ಹಿಂಬಾಲಿಸಿದರೆ ಏನೂ ಸಿಕ್ಕದು.


ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ ಎಂದು ಹೇಳುವರು.


ಬಡವನು ನೆರೆಯವನಿಗೂ ಅಸಹ್ಯ; ಧನವಂತನಿಗೆ ಬಹು ಜನ ವಿುತ್ರರು.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನಕ್ಕೆ ವಿಶೇಷವೇನಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬದೇ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.


ಶಿಷ್ಯರು ಆತನ ಮಾತುಗಳನ್ನು ಕೇಳಿ ಬೆರಗಾದರು. ಯೇಸು ತಿರಿಗಿ ಅವರಿಗೆ - ಮಕ್ಕಳಿರಾ, ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಉಬ್ಬಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು